ಹೈದರಾಬಾದ್ ಕರ್ನಾಟಕ ಪ್ರದೇಶ

ಹೈದರಾಬಾದ್ ಕರ್ನಾಟಕ ಪ್ರದೇಶ
Hyderabad Karnataka

ಶುಕ್ರವಾರ, ಏಪ್ರಿಲ್ 4, 2025

ರಾಜ್ಯ ಸರ್ಕಾರಿ ನೌಕರ'ರಿಗೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾದ ಸರ್ಕಾರ

ಈ ಸಂಬಂಧ ರಾಜ್ಯ ಸರ್ಕಾರದಿಂದ ಸಭಾ ಸೂಚನಾ ಪತ್ರವನ್ನು ಹೊರಡಿಸಲಾಗಿದ್ದು, ರಾಜ್ಯ ಸಚಿವ ಸಂಪುಟದ ತೀರ್ಮಾನಿಸಿದಂತೆ ಅಧಿಕಾರಿ, ನೌಕರರು ಮತ್ತು ಅವಲಂಬಿತ ಕುಟುಂಬದ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ವಿವಿಧ ಬ್ಯಾಂಕುಗಳು ಒದಗಿಸುವ ವಿಶಿಷ್ಟ ಸೌಲಭ್ಯಗಳನ್ನು ಪಡೆಯಲು ಸಹಕಾರಿಯಾಗುವಂತೆ ಸಂಬಳ ಪ್ಯಾಕೇಜ್ ಗಳ ಅಡಿಯಲ್ಲಿ ಖಾತೆಗಳನ್ನು ತೆರೆಯುವುದು, ಆಯ್ಕೆ ಮಾಡಿಕೊಳ್ಳುವುದನ್ನು ರಾಜ್ಯ ಸರ್ಕಾರವು ಕಡ್ಡಾಯಗೊಳಿಸಿದೆ ಎಂದಿದೆ.

ಸದರಿ ಯೋಜನೆಯಡಿ ಸರ್ಕಾರದ ಎಲ್ಲಾ ಅಧಿಕಾರಿಗಳು/ನೌಕರರು ಬ್ಯಾಂಕುಗಳು ನೀಡುತ್ತಿರುವ ಸಂಬಳ ಪ್ಯಾಕೇಜು ಖಾತೆಯಾಗಿ ಪರಿವರ್ತಿಸಿಕೊಳ್ಳಲು ಬ್ಯಾಂಕುಗಳು ಅನುಕೂಲ ಮಾಡಿಕೊಡ ಬೇಕಾಗಿದ್ದು, ಸದರಿ ವಿಷಯದಲ್ಲಿ ಏನಾದರೂ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ನಿವಾರಣೆ ಮಾಡುವುದು ಅವಶ್ಯಕವಾಗಿರುತ್ತದೆ ಎಂಬುದಾಗಿ ಹೇಳಿದೆ.

ಮುಂದುವರೆದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ರಾಜ್ಯ ಸರ್ಕಾರಿ ನೌಕರರ ಪರವಾಗಿ ಬ್ಯಾಂಕುಗಳು ಸಂಬಳ ಪ್ಯಾಕೇಜು ಖಾತೆಯಾಗಿ ಪರಿವರ್ತಿಸಿಕೊಳ್ಳುವ ಅಧಿಕಾರಿ/ನೌಕರರಿಗೆ, ರಾಷ್ಟ್ರೀಕೃತ ಬ್ಯಾಂಕುಗಳು, ಗೃಹ ಸಾಲ, ವೈಯಕ್ತಿಕ ಸಾಲ ಮತ್ತು ವಾಹನ ಖರೀದಿ ಸಾಲಗಳನ್ನು ರಿಯಾಯಿತಿ ಬಡ್ಡಿ ದರದಲ್ಲಿ ನೀಡುವ ಸಂಬಂಧ ಮನವಿ ಮಾಡಿದ್ದಾರೆ ಎಂಬುದಾಗಿ ತಿಳಿಸಿದೆ.ಟ

ಈ ಹಿನ್ನೆಲೆಯಲ್ಲಿ, ಮೇಲಿನ ವಿಷಯಗಳನ್ನು ಚರ್ಚಿಸಲು ಪ್ರಮುಖ ರಾಷ್ಟ್ರೀಕೃತ ಬ್ಯಾಂಕುಗಳ ಅಧಿಕಾರಿಗಳೊಂದಿಗೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಸರ್ಕಾರದ ಕಾರ್ಯದರ್ಶಿ (ವಿತ್ತೀಯ ಸುಧಾರಣೆ) ರವರ ಅಧ್ಯಕ್ಷತೆಯಲ್ಲಿ ದಿನಾಂಕ 15.04.2025 ರಂದು ಮಧ್ಯಾಹ್ನ 4.00 ಗಂಟೆಗೆ, ಕೊಠಡಿ ಸಂಖ್ಯೆ: 701, 7ನೇ ಮಹಡಿ, ಬಹುಮಹಡಿ ಕಟ್ಟಡ, ಬೆಂಗಳೂರು ಇಲ್ಲಿ ಸಭೆಯನ್ನು ನಡೆಸಲು ತೀರ್ಮಾನಿಸಲಾಗಿದೆ. ಈ ಸಭೆಗೆ ಅಗತ್ಯ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗುವಂತೆ ಕೋರಿದೆ.

ಬೆಸ್ಕಾಂನಿಂದ 'ವಿದ್ಯುತ್ ಸಮಸ್ಯೆ'ಗಳಿಗೆ ದೂರು ದಾಖಲಿಸಲು 'ವಾಟ್ಸ್ ಆಪ್ ಸಹಾಯವಾಣಿ' ಆರಂಭ | BESCOM WhatsApp Helpline Number

ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿಗೆ ನೀಡಿದ್ದ ಸಮನ್ಸ್ ರದ್ದತಿಗೆ ಕೋರ್ಟ್ ನಕಾರ

ಶಾಸಕ ಶಿವರಾಜ ಪಾಟೀಲ್ ಲೊಕೇಶನ್ ಟ್ರ್ಯಾಕ್ ಆರೋಪ: ಮಾಹಿತಿ ಪಡೆದು ಕ್ರಮ- ಗೃಹ ಸಚಿವ ಡಾ.ಜಿ ಪರಮೇಶ್ವರ್

ರಾಜ್ಯ ಸರ್ಕಾರಿ ನೌಕರರ 'ಆರೋಗ್ಯ ಸಂಜೀವಿನಿ ಯೋಜನೆ' ಪರಿಷ್ಕರಿಸಿ ಸರ್ಕಾರದಿಂದ ಮಹತ್ವದ ಆದೇಶ.

ರಾಜ್ಯ ಸರ್ಕಾರಿ ನೌಕರರ 'ಆರೋಗ್ಯ ಸಂಜೀವಿನಿ ಯೋಜನೆ' ಪರಿಷ್ಕರಿಸಿ ಸರ್ಕಾರದಿಂದ ಮಹತ್ವದ ಆದೇಶ.


ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ವಿಶೇಷ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (KASS) ಅನುಷ್ಠಾನಗೊಳಿಸಲು ಮೇಲೆ ಕ್ರ.ಸಂ.(1) ರಿಂದ (3) ರಲ್ಲಿ ಓದಲಾದ ಸರ್ಕಾರದ ಆದೇಶಗಳಲ್ಲಿ ಕೆಲವು ಕಾರ್ಯನೀತಿ ಸೂಚನೆಗಳನ್ನು ನೀಡಲಾಗಿದೆ ಎಂದಿದ್ದಾರೆ.

ಮುಂದುವರೆದು, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (KASS) ಸಮರ್ಪಕವಾಗಿ ಅನುಷ್ಠಾನಗೊಳಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರ್ಥಿಕ ಇಲಾಖೆ ಮತ್ತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ನೊಂದಿಗೆ ಚರ್ಚಿಸಿ, ಈ ಹಿಂದೆ ರೂಪಿಸಿರುವ ಯೋಜನೆಯಲ್ಲಿ ಕೆಲವು ಸೂಚನೆಗಳನ್ನು ಮಾರ್ಪಡಿಸುವುದು ಸೂಕ್ತವೆಂದು ತೀರ್ಮಾನಿಸಲಾಗಿದೆ. ಯೋಜನೆಗೆ ಸಂಬಂಧಿಸಿದಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೇಲೆ ಓದಲಾದ (4) ರ ಪತ್ರಗಳಲ್ಲಿ ಸರ್ಕಾರಕ್ಕೆ ಪರಿಷ್ಕೃತ ಒಡಂಬಡಿಕೆಯನ್ನು ಸಿದ್ಧಪಡಿಸಿ ಸಲ್ಲಿಸಿರುತ್ತದೆ ಮೇಲೆ ಕ್ರ.ಸಂ. (5) ರಲ್ಲಿ ಓದಲಾದ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ: 04.03.2025 ಮತ್ತು ದಿನಾಂಕ: 13.01.2025 ರಂದು ನಡೆದ ಸಭೆಗಳಲ್ಲಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕೆಲವು ಅಂಶಗಳ ಬಗ್ಗೆ ಸೂಚನೆಗಳನ್ನು ನೀಡಲಾಗಿದೆ ಹಾಗೂ ಕೆಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.

ದಿನಾಂಕ: 13.01.2025 ರಂದು ನಡೆದ ಸಭೆಯ ತೀರ್ಮಾನದಂತೆ ಮೇಲೆ ಕ್ರ.ಸಂ. (6) ರಲ್ಲಿ ಓದಲಾದ, ಪ್ರಧಾನ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರಿಂದ (ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಏಕಕಡತದಲ್ಲಿ) ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಪ್ಯಾಕೇಜ್ ದರಗಳು, ನಿಗದಿಪಡಿಸಿರದ ಚಿಕಿತ್ಸಾ ವಿಧಾನಗಳು (Unspecified procedures), ಇಂಪ್ಲಾಂಟ್ ದರಗಳು, ಆಸ್ಪತ್ರೆಗಳ ನೋಂದಾವಣೆ, ಒಡಂಬಡಿಕೆಯ ಷರತ್ತುಗಳು ಹಾಗೂ ಇತರೆ ಕೆಲವು ಅಂಶಗಳಿಗೆ ಸಂಬಂಧಿಸಿದಂತೆ ಪರಿಷ್ಕೃತ ಪುಸ್ತಾವನೆಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಸ್ವೀಕೃತವಾಗಿದೆ.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿಂದ ಸ್ವೀಕೃತವಾದ ಪರಿಷ್ಕೃತ ಪ್ರಸ್ತಾವನೆಯಲ್ಲಿ ಈ ಕೆಳಕಂಡ ಪ್ರಮುಖ ಅಂಶಗಳನ್ನು ಪ್ರಸ್ತಾಪಿಸಲಾಗಿದೆ:-
1) ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯು ಪ್ಯಾಕೇಜ್ ದರಗಳನ್ನು ಆಧರಿಸಿದೆ. KASS ಯೋಜನೆಯಡಿ ఒట్టు 2000 ವೈದ್ಯಕೀಯ ಕಾರ್ಯವಿಧಾನಗಳನ್ನು ಅಳವಡಿಸಿಕೊಳ್ಳಲು ಪ್ರಸ್ತಾಪಿಸಲಾಗಿದೆ. ಈ ಕಾರ್ಯವಿಧಾನಗಳನ್ನು CGHS, HBP 2022 ಮತ್ತು ಪ್ರಸ್ತುತ AB-ArK ಪ್ಯಾಕೇಜ್‌ಗಳಲ್ಲಿ ಲಭ್ಯವಿರುವ ಪ್ಯಾಕೇಜ್‌ಗಳಿಂದ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

KASS PACKAGE MASTER: ಯೋಜನೆಯ ಆರಂಭದ ಹಂತದಲ್ಲಿ ಈ ಕೆಳಕಂಡಂತೆ CGHS, AB-ARK, National Health Authority (NHA) 20 HBP 2022 da ಒಳಗೊಂಡ ಸಮ್ಮಿಶ್ರ ವೈದ್ಯಕೀಯ ಚಿಕಿತ್ಸಾ ವಿಧಾನಗಳು ಹಾಗೂ ದರಗಳನ್ನು ಒಳಗೊಂಡಿರುತ್ತವೆ ಎಂದು ತಿಳಿಸಿದ್ದಾರೆ.

ಗುರುವಾರ, ಏಪ್ರಿಲ್ 3, 2025

`ರಾಜ್ಯ ಸರ್ಕಾರಿ ನೌಕರರೇ' ಗಮನಿಸಿ : `ಸರ್ವೋತ್ತಮ ಸೇವಾ ಪ್ರಶಸ್ತಿ'ಗೆ ಅರ್ಜಿ ಆಹ್ವಾನ | Govt Employees

ಮುಂದುವರೆದು, ಸದರಿ ಸುತ್ತೋಲೆಯನ್ನು ಭಾಗಶ: ಪರಿಷ್ಕರಿಸಲು ತೀರ್ಮಾನಿಸಿ ಈ ಕೆಳಕಂಡಂತೆ ಕ್ರಮವಹಿಸುವಂತೆ ತಿಳಿಸಲಾಗಿದೆ.

1. 2024ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಲು 2023ನೇ ಕ್ಯಾಲೆಂಡರ್ ವರ್ಷದಲ್ಲಿ ಮಾಡಿರುವ ಉಪ ಕ್ರಮ /ಸಾಧನೆಯನ್ನು ಪರಿಗಣಿಸಲಾಗುವುದು. ಹಾಗೆಯೇ, 2025ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಲು 2024ನೇ ಕ್ಯಾಲೆಂಡರ್ ವರ್ಷದಲ್ಲಿ ಮಾಡಿರುವ ಉಪ ಕ್ರಮ /ಸಾಧನೆಯನ್ನು ಪರಿಗಣಿಸಲಾಗುವುದು.

2. 2024 ಹಾಗೂ 2025ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆನ್‌ಲೈನ್‌ನಲ್ಲಿ ನಾಮ ನಿರ್ದೇಶನವನ್ನು ಸಲ್ಲಿಸಲು ದಿನಾಂಕ: 14-04-2025 ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದೆ. ನಂತರ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ.

3. 2023ನೇ ಸಾಲಿನಲ್ಲಿ ಯಾವ ಜಿಲ್ಲೆಗಳು ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿಲ್ಲವೋ ಅವರೂ ಸಹ ಪ್ರಕ್ರಿಯೆಯನ್ನು ದಿನಾಂಕ: 16-04-2025 ರೊಳಗೆ ಪೂರ್ಣಗೊಳಿಸುವುದು ಮತ್ತು ಆಯ್ಕೆ ಪೂರ್ಣಗೊಂಡ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸುವುದು.

4. 2024 ಹಾಗೂ 2025ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯ ಆಯ್ಕೆಯನ್ನು ಪೂರ್ಣಗೊಳಿಸಿ, ಪೂರ್ಣಗೊಂಡ ಎರಡು ವರ್ಷಗಳ ಆಯ್ಕೆ ಪಟ್ಟಿಯನ್ನು ದಿನಾಂಕ: 16-04-2025ರೊಳಗೆ ಸರ್ಕಾರಕ್ಕೆ ಸಲ್ಲಿಸುವುದು.

5. 2024 ಹಾಗೂ 2025ನೇ ಸಾಲಿನ ಎರಡು ವರ್ಷಗಳಿಗೆ ಪ್ರತಿ ವರ್ಷಕ್ಕೆ ತಲಾ ಇಬ್ಬರಂತೆ ಒಟ್ಟು 4 ಜನ ಅರ್ಹ ಅಧಿಕಾರಿ / ನೌಕರರನ್ನು ಸರ್ವೋತ್ತಮ ಸೇವಾ ಪ್ರಶಸ್ತಿಗೆ ಪರಿಗಣಿಸಲು ಜಿಲ್ಲೆಯಿಂದ ರಾಜ್ಯಮಟ್ಟಕ್ಕೆ ನಾಮ ನಿರ್ದೇಶನಗಳನ್ನು ಸೂಕ್ತ ಶಿಫಾರಸ್ಸಿನೊಂದಿಗೆ ದಿನಾಂಕ: 16-04-2025 ರೊಳಗೆ ಸರ್ಕಾರಕ್ಕೆ ವಿಳಂಬವಿಲ್ಲದೇ ನಿಗದಿತ ನಮೂನೆಯಲ್ಲಿ ಕಡ್ಡಾಯವಾಗಿ ಸಲ್ಲಿಸುವುದು.


'ಕೇಂದ್ರ ಸರ್ಕಾರಿ ನೌಕರ'ರಿಗೆ ಶೇ.2ರಷ್ಟು 'ತುಟ್ಟಿಭತ್ಯೆ' ಹೆಚ್ಚಿಸಿ ಅಧಿಕೃತ ಆದೇಶ | Central govt employees DA hike

'ಕೇಂದ್ರ ಸರ್ಕಾರಿ ನೌಕರ'ರಿಗೆ ಶೇ.2ರಷ್ಟು 'ತುಟ್ಟಿಭತ್ಯೆ' ಹೆಚ್ಚಿಸಿ ಅಧಿಕೃತ ಆದೇಶ | Central govt employees DA hike

Job Alert: ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗ, ₹81000 ವೇತನ

ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಯುವಕ, ಯುವತಿಯರಿಗೆ ಇದೊಂದು ಉತ್ತಮ ಅವಕಾಶವಾಗಿದೆ.

ರಾಜ್ಯ ಆದಾಯ ತೆರಿಗೆ ಇಲಾಖೆ ಸ್ಟೆನೋಗ್ರಾಫರ್ ಗ್ರೇಡ್ II, ತೆರಿಗೆ ಸಹಾಯಕ, ಮತ್ತು ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ಆರಂಭಿಸಿದೆ. ಒಟ್ಟು ವಿವಿಧ 56 ಹುದ್ದೆಗಳಿಗಾಗಿ ನೇಮಕಾತಿ ನಡೆಸಲಾಗುತ್ತಿದೆ. ಆಸಕ್ತರು ಆನಲೈನ್‌ ಮೂಲಕ (incometax.gov.in) ಏಪ್ರಿಲ್ 5ರೊಳಗೆ ಅರ್ಜಿ ಸಲ್ಲಿಸಬೇಕಿದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದಿಲ್ಲ ತಿಳಿಸಲಾಗಿದೆ.

ನೇಮಕಾತಿ ಪೂರ್ಣ ವಿವರ

ನೇಮಕಾತಿ ಸಂಸ್ಥೆ: ಆದಾಯ ತೆರಿಗೆ ಇಲಾಖೆ

ಗರಿಷ್ಠ ವಯೋಮಿತಿ: 27 ವರ್ಷ

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್

ಅರ್ಜಿ ಸಲ್ಲಿಕೆ ಅಂತಿಮ ದಿನ: ಏಪ್ರಿಲ್ 05

ಸ್ಟೆನೋಗ್ರಾಫರ್ ಗ್ರೇಡ್ II: 2

ತೆರಿಗೆ ಸಹಾಯಕ: 28

ಮಲ್ಟಿ-ಟಾಸ್ಕಿಂಗ್ ಸ್ಟಾಫ್: 26 ಹುದ್ದೆ

ಒಟ್ಟು ಹುದ್ದೆಗಳು: 56

ವಿದ್ಯಾರ್ಹತೆ ಏನಿರಬೇಕು?

ಅರ್ಜಿ ಸಲ್ಲಿಸಬಯಸುವ ಯಾವುದೇ ಅಭ್ಯರ್ಥಿಗಳು ಕನಿಷ್ಠ ಪದವಿ ಪಡೆದಿರಬೇಕು. ಅವರು ಕನಿಷ್ಠ 18 ರಿಂದ ಗರಿಷ್ಠ 27 ವರ್ಷದವರಾಗಿರಬೇಕು. ಎಸ್‌ಎಸ್‌ಎಲ್‌ಸಿ ಉತ್ತೀರ್ಣ ಆದವರಿಗೂ ಇಲ್ಲಿ ಪೋಸ್ಟ್ ಖಾಲಿ ಇದೆ. ಆ ಅಭ್ಯರ್ಥಿಗೆ ಗರಿಷ್ಠ 25 ವರ್ಷ ವಯಸ್ಸಿನ ಮಿತಿ ನಿಗದಿಪಡಿಸಲಾಗಿದೆ. ಎಲ್ಲ ಹುದ್ದೆಗಳ ಆಯ್ಕೆಗೂ ಪ್ರತ್ಯೇಕ ವಿದ್ಯಾರ್ಹತೆ ಪರಿಗಣಿಸಲಾಗುತ್ತದೆ.

ಮಾಸಿಕ ವೇತನ ಎಷ್ಟು?

ಅಭ್ಯರ್ಥಿಗಳು ಸರ್ಕಾರಿ ಮಟ್ಟದಲ್ಲಿ ಉದ್ಯೋಗ ಹೊಂದಲು ಬಯಸಿದಲ್ಲಿ ಕೂಡಲೇ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದವರಿಗೆ ಗರಿಷ್ಠ 81,100 ರೂಪಾಯಿ ಮಾಸಿಕ ವೇತನ ಇರಲಿದೆ. ಸ್ಟೆನೋಗ್ರಾಫರ್ ಗ್ರೇಡ್ II ಹಾಗೂ ತೆರಿಗೆ ಸಹಾಯಕ ಅಭ್ಯರ್ಥಿಗಳಿಗೆ ಮಾಸಿಕ 25,500 ರಿಂದ 81,100 ರೂಪಾಯಿ. ಮಲ್ಟಿ-ಟಾಸ್ಕಿಂಗ್ ಸ್ಟಾಫ್ ಹುದ್ದೆಗೆ ಆಯ್ಕೆ ಆದರೆ ಮಾಸಿಕ 18,000 ರಿಂದ ರೂ 56,900 ರೂಪಾಯಿ ವಿಧಿಸಲಾಗಿದೆ.

ಅರ್ಜಿ ಸಲ್ಲಿಕೆ ಹೇಗೆ?

ಅರ್ಹ ಅಭ್ಯರ್ಥಿಗಳು ಕೂಡಲೇ ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ incometax.gov.in ಗೆ ಭೇಟಿ ನೀಡಬೇಕು. ಅಲ್ಲಿನ ಅರ್ಜಿ ವಿಭಾಗಕ್ಕೆ ತೆರಳಿ ಅರ್ಜಿ ಡೌಲ್‌ಲೋಡ್ ಮಡಿಕೊಂಡು ಏಪ್ರಿಲ್ 5ರ ರಾತ್ರಿ 12ರ ಒಳಗೆ ಸೂಕ್ತ ದಾಖಲೆಗಳ ಸಮೇತ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ. ಲಿಖಿತ ಪರೀಕ್ಷೆ ಇಲ್ಲದೇ ಆಯ್ಕೆ ಮಾಡಲಾಗುತ್ತದೆ.

'ರಾಜ್ಯ ಸರ್ಕಾರಿ ನೌಕರ'ರಿಗೆ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ' ಕುರಿತು ಮಹತ್ವದ ಮಾಹಿತಿ

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ವಿಶೇಷ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (KASS) ಅನುಷ್ಠಾನಗೊಳಿಸಲು ಮೇಲೆ ಕ್ರ.ಸಂ.(1) ರಿಂದ (3) ರಲ್ಲಿ ಓದಲಾದ ಸರ್ಕಾರದ ಆದೇಶಗಳಲ್ಲಿ ಕೆಲವು ಕಾರ್ಯನೀತಿ ಸೂಚನೆಗಳನ್ನು ನೀಡಲಾಗಿದೆ ಎಂದಿದ್ದಾರೆ.

ಮುಂದುವರೆದು, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (KASS) ಸಮರ್ಪಕವಾಗಿ ಅನುಷ್ಠಾನಗೊಳಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರ್ಥಿಕ ಇಲಾಖೆ ಮತ್ತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ನೊಂದಿಗೆ ಚರ್ಚಿಸಿ, ಈ ಹಿಂದೆ ರೂಪಿಸಿರುವ ಯೋಜನೆಯಲ್ಲಿ ಕೆಲವು ಸೂಚನೆಗಳನ್ನು ಮಾರ್ಪಡಿಸುವುದು ಸೂಕ್ತವೆಂದು ತೀರ್ಮಾನಿಸಲಾಗಿದೆ. ಯೋಜನೆಗೆ ಸಂಬಂಧಿಸಿದಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೇಲೆ ಓದಲಾದ (4) ರ ಪತ್ರಗಳಲ್ಲಿ ಸರ್ಕಾರಕ್ಕೆ ಪರಿಷ್ಕೃತ ಒಡಂಬಡಿಕೆಯನ್ನು ಸಿದ್ಧಪಡಿಸಿ ಸಲ್ಲಿಸಿರುತ್ತದೆ ಮೇಲೆ ಕ್ರ.ಸಂ. (5) ರಲ್ಲಿ ಓದಲಾದ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ: 04.03.2025 ಮತ್ತು ದಿನಾಂಕ: 13.01.2025 ರಂದು ನಡೆದ ಸಭೆಗಳಲ್ಲಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕೆಲವು ಅಂಶಗಳ ಬಗ್ಗೆ ಸೂಚನೆಗಳನ್ನು ನೀಡಲಾಗಿದೆ ಹಾಗೂ ಕೆಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.

ದಿನಾಂಕ: 13.01.2025 ರಂದು ನಡೆದ ಸಭೆಯ ತೀರ್ಮಾನದಂತೆ ಮೇಲೆ ಕ್ರ.ಸಂ. (6) ರಲ್ಲಿ ಓದಲಾದ, ಪ್ರಧಾನ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರಿಂದ (ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಏಕಕಡತದಲ್ಲಿ) ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಪ್ಯಾಕೇಜ್ ದರಗಳು, ನಿಗದಿಪಡಿಸಿರದ ಚಿಕಿತ್ಸಾ ವಿಧಾನಗಳು (Unspecified procedures), ಇಂಪ್ಲಾಂಟ್ ದರಗಳು, ಆಸ್ಪತ್ರೆಗಳ ನೋಂದಾವಣೆ, ಒಡಂಬಡಿಕೆಯ ಷರತ್ತುಗಳು ಹಾಗೂ ಇತರೆ ಕೆಲವು ಅಂಶಗಳಿಗೆ ಸಂಬಂಧಿಸಿದಂತೆ ಪರಿಷ್ಕೃತ ಪುಸ್ತಾವನೆಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಸ್ವೀಕೃತವಾಗಿದೆ.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿಂದ ಸ್ವೀಕೃತವಾದ ಪರಿಷ್ಕೃತ ಪ್ರಸ್ತಾವನೆಯಲ್ಲಿ ಈ ಕೆಳಕಂಡ ಪ್ರಮುಖ ಅಂಶಗಳನ್ನು ಪ್ರಸ್ತಾಪಿಸಲಾಗಿದೆ:-
1) ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯು ಪ್ಯಾಕೇಜ್ ದರಗಳನ್ನು ಆಧರಿಸಿದೆ. KASS ಯೋಜನೆಯಡಿ ఒట్టు 2000 ವೈದ್ಯಕೀಯ ಕಾರ್ಯವಿಧಾನಗಳನ್ನು ಅಳವಡಿಸಿಕೊಳ್ಳಲು ಪ್ರಸ್ತಾಪಿಸಲಾಗಿದೆ. ಈ ಕಾರ್ಯವಿಧಾನಗಳನ್ನು CGHS, HBP 2022 ಮತ್ತು ಪ್ರಸ್ತುತ AB-ArK ಪ್ಯಾಕೇಜ್‌ಗಳಲ್ಲಿ ಲಭ್ಯವಿರುವ ಪ್ಯಾಕೇಜ್‌ಗಳಿಂದ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

KASS PACKAGE MASTER: ಯೋಜನೆಯ ಆರಂಭದ ಹಂತದಲ್ಲಿ ಈ ಕೆಳಕಂಡಂತೆ CGHS, AB-ARK, National Health Authority (NHA) 20 HBP 2022 da ಒಳಗೊಂಡ ಸಮ್ಮಿಶ್ರ ವೈದ್ಯಕೀಯ ಚಿಕಿತ್ಸಾ ವಿಧಾನಗಳು ಹಾಗೂ ದರಗಳನ್ನು ಒಳಗೊಂಡಿರುತ್ತವೆ ಎಂದು ತಿಳಿಸಿದ್ದಾರೆ.

ಮನೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಏಪ್ರಿಲ್.27ರಂದು 42,345 ಮನೆ ಹಂಚಿಕೆ

BIG NEWS: ಸಾಗರದಲ್ಲಿ ಬಹುಕೋಟಿ 'ಸೇಲ್ಸ್ ಸರ್ಟಿಫಿಕೇಟ್' ಹಗರಣ: ತನಿಖೆಗೆ ಸಚಿವರಿಗೆ 'ಶಾಸಕ ಗೋಪಾಕೃಷ್ಣ ಬೇಳೂರು' ಪತ್ರ

BREAKING: 2025-26ನೇ ಸಾಲಿನ 'ಶೈಕ್ಷಣಿಕ ವೇಳಾಪಟ್ಟಿ' ಪ್ರಕಟ: ಮೇ.29ರಿಂದ ರಾಜ್ಯದಲ್ಲಿ ಶಾಲೆಗಳು ಪುನರಾರಂಭ

ಸೋಮವಾರ, ಮಾರ್ಚ್ 31, 2025

ಏಕೀಕೃತ ಪಿಂಚಣಿ ಯೋಜನೆ ಜಾರಿ ಬಗ್ಗೆ ಕೇಂದ್ರ ಸರ್ಕಾರಿ ನೌಕರರಿಗೆ ಪ್ರಮುಖ ಮಾಹಿತಿ

ಈ ನಿಯಮಗಳು ಕೇಂದ್ರ ಸರ್ಕಾರಿ ನೌಕರರ ಮೂರು ಗುಂಪುಗಳಿಗೆ ಸಂಬಂಧಿಸಿವೆ. ಮೊದಲ ವರ್ಗವು ಏಪ್ರಿಲ್ 1, 2025 ರಂದು ಸೇವೆಯಲ್ಲಿರುವ ಅಸ್ತಿತ್ವದಲ್ಲಿರುವ ಕೇಂದ್ರ ಸರ್ಕಾರಿ ಉದ್ಯೋಗಿಯನ್ನು ಒಳಗೊಂಡಿದೆ, ಅವರು ಎನ್‌ಪಿಎಸ್ ವ್ಯಾಪ್ತಿಗೆ ಒಳಪಡುತ್ತಾರೆ.

ಆದರೆ, ಎರಡನೇ ವರ್ಗವು ಏಪ್ರಿಲ್ 1, 2025ರಂದು ಅಥವಾ ನಂತರ ಸೇವೆಗೆ ಸೇರುವ ಕೇಂದ್ರ ಸರ್ಕಾರಿ ಸೇವೆಗಳಲ್ಲಿ ಹೊಸದಾಗಿ ನೇಮಕಗೊಂಡವರನ್ನು ಒಳಗೊಂಡಿದೆ. ಮೂರನೇ ವರ್ಗವು ಎನ್‌ಪಿಎಸ್‌ನ ಭಾಗವಾಗಿದ್ದ ಮತ್ತು ಈ ತಿಂಗಳ 31ರಂದು ಅಥವಾ ಅದಕ್ಕೂ ಮೊದಲು ನಿವೃತ್ತರಾದ ಕೇಂದ್ರ ಸರ್ಕಾರಿ ನೌಕರರನ್ನು ಒಳಗೊಂಡಿದೆ.

ನಿಯಮಿತ ನಿವೃತ್ತಿ ಅಥವಾ ಸ್ವಯಂಪ್ರೇರಿತ ನಿವೃತ್ತಿಯ ಮೂಲಕ ಯುಪಿಎಸ್‌ಗೆ ಅರ್ಹರಾಗಿರುತ್ತಾರೆ. ಸುಮಾರು 23 ಲಕ್ಷ ಕೇಂದ್ರ ಸರ್ಕಾರಿ ನೌಕರರು ಈ ಯೋಜನೆಯ ಪ್ರಯೋಜನ ಪಡೆಯುತ್ತಾರೆ ಎಂದು ಹೇಳಲಾಗಿದೆ. ಜನವರಿ 1, 2004ರಂದು ಅಥವಾ ನಂತರ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಾಗೂ ಭವಿಷ್ಯದಲ್ಲಿ ಸೇರಲಿರುವವರಿಗೆ ಯುಪಿಎಸ್ ಮುಕ್ತವಾಗಿದೆ. NPSನಿಂದ UPSಗೆ ಬದಲಾಯಿಸುವ ಆಯ್ಕೆಯೊಂದಿಗೆ.

ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಚೌಕಟ್ಟಿಗೆ ಸೇರಲು, ಅರ್ಹ ಉದ್ಯೋಗಿಗಳು ಏಪ್ರಿಲ್ 1ರಿಂದ ಪ್ರೋಟೀನ್ CRA ಪೋರ್ಟಲ್ ಮೂಲಕ ತಮ್ಮ ದಾಖಲಾತಿ ಮತ್ತು ಕ್ಲೇಮ್ ಫಾರ್ಮ್‌ಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬಹುದು. ಈ ಯೋಜನೆಯು 25 ವರ್ಷಗಳ ಕನಿಷ್ಠ ಅರ್ಹತಾ ಸೇವೆಗಾಗಿ ನಿವೃತ್ತಿಗೆ ಮೊದಲು ಕಳೆದ ಹನ್ನೆರಡು ತಿಂಗಳುಗಳಲ್ಲಿ ಪಡೆದ ಸರಾಸರಿ ಮೂಲ ವೇತನದ 50 ಪ್ರತಿಶತದಷ್ಟು ಪಿಂಚಣಿಯನ್ನು ಖಚಿತಪಡಿಸುತ್ತದೆ.

ಉದ್ಯೋಗಿ ನಿಧನರಾದ ಸಂದರ್ಭದಲ್ಲಿ ಕುಟುಂಬವು ಪಿಂಚಣಿಯ 60 ಪ್ರತಿಶತವನ್ನು ಪಡೆಯುತ್ತದೆ. ಯುಪಿಎಸ್ ಯೋಜನೆಯಡಿಯಲ್ಲಿ, ಕನಿಷ್ಠ 10 ವರ್ಷಗಳ ಸೇವೆಯ ನಂತರ ತಿಂಗಳಿಗೆ ಕನಿಷ್ಠ 10,000 ರೂಪಾಯಿಗಳ ಪಿಂಚಣಿಯನ್ನು ಸಹ ಖಾತರಿಪಡಿಸಲಾಗುತ್ತದೆ.

'ರಾಜ್ಯ ಸರ್ಕಾರಿ' ನೌಕರರೇ ಗಮನಿಸಿ : ಗಳಿಕೆ ರಜೆ ಸೇರಿ ವಿವಿಧ ರಜೆ & ನಿಯಮಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಸತತವಾಗಿ 4 ತಿಂಗಳಿಗಿಂತಲೂ ಹೆಚ್ಚಾಗಿ ಅನಧಿಕೃತ ಗೈರು ಹಾಜರಾದಲ್ಲಿ ಅಂತಹ ಸರ್ಕಾರಿ ನೌಕರನನ್ನು ವಿಚಾರಣೆಗೆ ಒಳಪಡಿಸಿ (ಸಿಸಿಎ) ಪ್ರಕಾರ ಸೇವೆಯಿಂದ ವಜಾ ಮಾಡಬಹುದು.

ಅನುಮತಿ ಇಲ್ಲದೆ ಗೈರು ಹಾಜರಾದಲ್ಲಿ 'ಅನಧಿಕೃತ ಗೈರು ಹಾಜರಿ' ಎಂದು ಪರಿಗಣಿಸಿ ಸಂಬಳವನ್ನು ಕಟಾವು ಮಾಡಲಾಗುವುದು.106ಬಿ ಮುಷ್ಕರದಲ್ಲಿ ಭಾಗವಹಿಸಿದರೆ - ಹಿಂದಿನ ಸೇವಾ ಸೌಲಭ್ಯಗಳು
ದೊರೆಯುವುದಿಲ್ಲ.

ಏಕೀಕೃತ ಪಿಂಚಣಿ ಯೋಜನೆ ಜಾರಿ; ಯಾರು ಅರ್ಹರು, ಎಷ್ಟು ಪಿಂಚಣಿ ಬರಲಿದೆ? ಇಲ್ಲಿದೆ ಲೆಕ್ಕಾಚಾರ!

ಏಕೀಕೃತ ಪಿಂಚಣಿ ಯೋಜನೆ ಜಾರಿ; ಯಾರು ಅರ್ಹರು, ಎಷ್ಟು ಪಿಂಚಣಿ ಬರಲಿದೆ? ಇಲ್ಲಿದೆ ಲೆಕ್ಕಾಚಾರ!


ನಮ್ಮ ದೇಶದಲ್ಲಿ ನಾಳೆ ಅಂದರೆ (ಏ.1 2025ರಿಂದ) ಏಕೀಕೃತ ಪಿಂಚಣಿ ಯೋಜನೆ (Unified Pension Scheme-UPS) ಜಾರಿಗೆ ಬರಲಿದೆ. ಇದನ್ನು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ಇದನ್ನು ಸೂಚಿಸಲು ಅಧಿಸೂಚನೆ ಹೊರಡಿಸಿದೆ.


ಹೊಸ ಯುಪಿಎಸ್ ಆಯ್ಕೆ ಮಾಡಿಕೊಳ್ಳಲು ಎಲ್ಲಾ ಕೇಂದ್ರ ನೌಕರರಿಗೆ ಏಪ್ರಿಲ್ 1 ರಿಂದ ಯೋಜನೆ ತೆರೆದಿರುತ್ತದೆ. ಈ ಯೋಜನೆಯನ್ನು ವಿಸ್ತರಿಸಿ ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ನೌಕರರನ್ನು ಸಹ ಇದರಲ್ಲಿ ಸೇರಿಸಿಕೊಳ್ಳಬಹುದು. ಇದಕ್ಕೆ ಆಯಾ ರಾಜ್ಯ ಸರ್ಕಾರಗಳ ತೀರ್ಮಾನಕ್ಕೆ ಬಿಡಲಾಗಿದೆ.

ಯುಪಿಎಸ್‌ ಉದ್ದೇಶವೇನು?
ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ನೌಕರರಿಗೆ ನಿರ್ದಿಷ್ಟ ಪಿಂಚಣಿ ಭದ್ರತೆಯನ್ನು ನೀಡುವುದು ಮೋದಿ ಸರ್ಕಾರ ಕಳೆದ ವರ್ಷ ಘೋಷಿಸಿದ ಯುಪಿಎಸ್‌ನ ಉದ್ದೇಶವಾಗಿದೆ. ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ಅಡಿಯಲ್ಲಿ ಈ ಯೋಜನೆ ಮುಖ್ಯವಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಆಗಿದೆ. ಸರ್ಕಾರಿ ನೌಕರಿಯಲ್ಲಿರುವ ಮತ್ತು ಈಗಾಗಲೇ ಎನ್‌ಪಿಎಸ್‌ನಲ್ಲಿ ನೋಂದಾಯಿಸಿಕೊಂಡಿರುವವರಿಗೆ ಯುಪಿಎಸ್ ಆಯ್ಕೆ ಮಾಡುವ ಅವಕಾಶ ಸಿಗಲಿದೆ ಎಂಬುದನ್ನು ನೆನಪಿಡಿ.

UPS ನಲ್ಲಿ 50% ಪಿಂಚಣಿ ಖಾತರಿ ಯಾರಿಗೆ?
ಯುಪಿಎಸ್ ಅಡಿಯಲ್ಲಿ, ಕನಿಷ್ಠ 25 ವರ್ಷಗಳ ಕಾಲ ಕೆಲಸ ಮಾಡಿದ ವ್ಯಕ್ತಿಗೆ ನಿವೃತ್ತಿಗೆ ಮುಂಚೆ ಕೊನೆಯ 12 ತಿಂಗಳ ಸರಾಸರಿ ಮೂಲ ವೇತನದ 50% ಗೆ ಸಮಾನವಾದ ಪಿಂಚಣಿ ಸಿಗುತ್ತದೆ. ಯಾರಾದರೂ 10 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ್ದರೆ, ಅವರಿಗೆ ತಿಂಗಳಿಗೆ ಕನಿಷ್ಠ 10,000 ರೂಪಾಯಿ ಪಿಂಚಣಿ ಸಿಗುತ್ತದೆ.

ಪಿಂಚಣಿ ಲೆಕ್ಕಾಚಾರದ ಸೂತ್ರವೇನು?
ಪಿಂಚಣಿ=50% (ಕಳೆದ 12 ತಿಂಗಳ ಮೂಲ ವೇತನದ ಒಟ್ಟು/12)
ಸೇವೆ 25 ವರ್ಷ ಅಥವಾ ಅದಕ್ಕಿಂತ ಹೆಚ್ಚಿದ್ದರೆ ಪೂರ್ಣ ಪಿಂಚಣಿ ಸಿಗುತ್ತದೆ.
ಸೇವೆ 25 ವರ್ಷಕ್ಕಿಂತ ಕಡಿಮೆಯಿದ್ದರೆ, ಪಿಂಚಣಿ ಅದೇ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ.

ಏಕೀಕೃತ ಪಿಂಚಣಿ ಯೋಜನೆ ಲಾಭಾನಾ?ನಷ್ಟನಾ? ಆರ್ಥಿಕ ತಜ್ಞರು ಹೇಳೋದೇನು?

ಉದಾಹರಣೆ-
ನಿಮ್ಮ 25 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಸೇವೆಯಲ್ಲಿ ಸರಾಸರಿ ಮೂಲ ವೇತನ 1,00,000 ರೂಪಾಯಿ ಆಗಿದ್ದರೆ, ಪಿಂಚಣಿ ತಿಂಗಳಿಗೆ 50,000 ರೂಪಾಯಿ ಆಗುತ್ತದೆ.
ನಿಮ್ಮ 20 ವರ್ಷಗಳ ಸೇವೆಯಲ್ಲಿ ಸರಾಸರಿ ವೇತನ 1,00,000 ರೂಪಾಯಿ ಆಗಿದ್ದರೆ, ಪಿಂಚಣಿ ತಿಂಗಳಿಗೆ 40,000 ರೂಪಾಯಿ ಆಗುತ್ತದೆ.
ನಿಮ್ಮ ಮೂಲ ವೇತನ 15000 ರೂಪಾಯಿ ಆಗಿದ್ದರೆ, ಪಿಂಚಣಿ ತಿಂಗಳಿಗೆ 10,000 ರೂಪಾಯಿ ಆಗುತ್ತದೆ. ಮೊತ್ತವು ಸೂತ್ರಕ್ಕಿಂತ ಕಡಿಮೆಯಿದ್ದರೂ ಸಹ.

UPS ಗೆ ಯಾರು ಅರ್ಹರು?
1- ಏಪ್ರಿಲ್ 1, 2025 ರಂದು ಸೇವೆಯಲ್ಲಿರುವ ಮತ್ತು ಈಗಾಗಲೇ ಎನ್‌ಪಿಎಸ್ ಅಡಿಯಲ್ಲಿ ಬರುವ ಕೇಂದ್ರ ಸರ್ಕಾರಿ ನೌಕರರು.
2- ಇದರ ಜೊತೆಗೆ ಏಪ್ರಿಲ್ 1, 2025 ರಂದು ಅಥವಾ ನಂತರ ಕೇಂದ್ರ ಸರ್ಕಾರದ ಸೇವೆಯಲ್ಲಿ ಬರುವ ಹೊಸ ನೌಕರರು ಸಹ ಇದಕ್ಕೆ ಅರ್ಹರಾಗಿರುತ್ತಾರೆ, ಆದರೆ ಅವರು ಸೇರುವ 30 ದಿನಗಳ ಒಳಗೆ UPS ಅನ್ನು ಆಯ್ಕೆ ಮಾಡಬೇಕು.
3- ಎನ್‌ಪಿಎಸ್ ಅಡಿಯಲ್ಲಿ ಇದ್ದು 31 ಮಾರ್ಚ್ 2025 ರಂದು ಅಥವಾ ಅದಕ್ಕಿಂತ ಮೊದಲು ನಿವೃತ್ತರಾದ ನೌಕರರು
4- ಇದರ ಜೊತೆಗೆ ಎನ್‌ಪಿಎಸ್ ಅಡಿಯಲ್ಲಿ ನಿವೃತ್ತರಾದ ನೌಕರನು ಮರಣ ಹೊಂದಿದರೆ ಮತ್ತು ಅವರು ಯುಪಿಎಸ್ ಆಯ್ಕೆಯನ್ನು ಆರಿಸದಿದ್ದರೆ, ಕಾನೂನು ಪ್ರಕಾರ ಅವರ ಪತ್ನಿ ಅಥವಾ ಪತಿ ಈ ಯೋಜನೆಯಲ್ಲಿ ಸೇರಲು ಅರ್ಹರಾಗಿರುತ್ತಾರೆ.

ಎನ್‌ಪಿಎಸ್‌ ವಿರೋಧಕ್ಕೆ ಮಣಿದ ಮೋದಿ ಸರ್ಕಾರ: ಹೊಸ ಯೋಜನೆಯಲ್ಲಿ 50% ಪಿಂಚಣಿ ಖಚಿತ..!

ಒಮ್ಮೆ ಆಯ್ಕೆ ಮಾಡಿದ ನಂತರ ಬದಲಾಯಿಸಲು ಸಾಧ್ಯವಿಲ್ಲ: UPS ಗೆ ಅರ್ಹರಾದ ಈಗಿನ ಮತ್ತು ಮಾಜಿ ನೌಕರರು ಏಪ್ರಿಲ್ 1, 2025 ರಿಂದ ಮೂರು ತಿಂಗಳ ಒಳಗೆ ಈ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ. ಒಮ್ಮೆ ಯುಪಿಎಸ್ ಆಯ್ಕೆ ಮಾಡಿದ ನಂತರ ಅದು ಅಂತಿಮವಾಗುತ್ತದೆ ಮತ್ತು ಅದರಲ್ಲಿ ಬದಲಾವಣೆ ಮಾಡಲು ಸಾಧ್ಯವಿಲ್ಲ.

ಶನಿವಾರ, ಮಾರ್ಚ್ 29, 2025

Tax changes: ಏಪ್ರಿಲ್‌ 1ರಿಂದ ತೆರಿಗೆ ಬದಲಾವಣೆ ಯಾವುದು ದುಬಾರಿ-ಅಗ್ಗ? ಕಂಪ್ಲೀಟ್‌ ಡಿಟೇಲ್ಸ್‌

Tax changes: ಏಪ್ರಿಲ್‌ 1ರಿಂದ ತೆರಿಗೆ ಬದಲಾವಣೆ ಯಾವುದು ದುಬಾರಿ-ಅಗ್ಗ? ಕಂಪ್ಲೀಟ್‌ ಡಿಟೇಲ್ಸ್‌


ಏಪ್ರಿಲ್‌ 1ರಿಂದ ಹೊಸ ಆರ್ಥಿಕ ವರ್ಷ ಅಥವಾ ಫೈನಾನ್ಷಿಯಲ್‌ ಇಯರ್‌ ಆಗಿರುವ 2025-26 ಆರಂಭವಾಗುತ್ತದೆ. ಏಪ್ರಿಲ್‌ 1ಕ್ಕೆ ಆರಂಭವಾಗುವ ಆರ್ಥಿಕ ವರ್ಷವು ಮಾರ್ಚ್‌ 31ಕ್ಕೆ ಮುಕ್ತಾಯವಾಗುತ್ತದೆ. ತೆರಿಗೆದಾರರು, ಬಿಸಿನೆಸ್‌ ಮಾಡುವವರು, ಸರಕಾರಕ್ಕೆ ಇದು ಮಹತ್ವದ ದಿನವಾಗಿರುತ್ತದೆ.

ಹಣಕಾಸು ಲೆಕ್ಕಾಚಾರಗಳು, ತೆರಿಗೆಗೆ ಸಂಬಂಧಿಸಿ ಮಹತ್ವದ ಬದಲಾವಣೆಗಳು ಏಪ್ರಿಲ್‌ನಿಂದ ಅನ್ವಯವಾಗುತ್ತವೆ(Tax changes). ಕೇಂದ್ರ ಸರಕಾರದ ಬಜೆಟ್‌ ಕೂಡ ಈದೇ ದಿನದಿಂದ ಜಾರಿಯಾಗುತ್ತದೆ. ಹಾಗಾದ್ರೆ ಯಾವೆಲ್ಲ ಹೊಸ ಬದಲಾವಣೆಗಳು ಬರುತ್ತಿವೆ ಎಂಬುದನ್ನು ತಿಳಿಯೋಣ.

ಮೊದಲನೆಯದಾಗಿ ನಿಶ್ಚಿತ ಠೇವಣಿ ಅಥವಾ ಫಿಕ್ಸೆಡ್‌ ಡೆಪಾಸಿಟ್‌ಗೆ ಸಿಗುವ ಬಡ್ಡಿ ಆದಾಯದ ಮೇಲೆ ಟಿಡಿಎಸ್ ತೆರಿಗೆ ಕಡಿತಕ್ಕೆ ಇರುವ ಮಿತಿಯಲ್ಲಿ ಬದಲಾವಣೆಯಾಗಲಿದೆ. ಇದರಿಂದಾಗಿ ಮುಖ್ಯವಾಗಿ ಹಿರಿಯ ನಾಗರಿಕರಿಗೆ ಲಾಭವಾಲಿದೆ. ಹಿರಿಯ ನಾಗರಿಕರಿಗೆ ಫಿಕ್ಸೆಡ್‌ ಡೆಪಾಸಿಟ್‌, ಆರ್‌ಡಿ ಮತ್ತು ಅದೇ ರೀತಿಯ ಹೂಡಿಕೆಯ ಯೋಜನೆಗಳಲ್ಲಿ ಸಿಗುವ ಆದಾಯದಲ್ಲಿ 1 ಲಕ್ಷ ರುಪಾಯಿ ತನಕ ಟಿಡಿಎಸ್‌ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ. ಒಂದು ಲಕ್ಷ ದಾಟಿದ ಬಳಿಕ ತೆರಿಗೆ ಅನ್ವಯವಾಗಲಿದೆ. ಷೇರುದಾರರಿಗೆ 10,000 ರುಪಾಯಿ ತನಕದ ಡಿವಿಡೆಂಡ್‌ಗೆ ಟಿಡಿಎಸ್‌ ಇರುವುದಿಲ್ಲ. ಮ್ಯೂಚುವಲ್‌ ಫಂಡ್‌ ಯುನಿಟ್‌ಗಳ ಆದಾಯಕ್ಕೆ 10,000 ರುಪಾಯಿ ತನಕ ಟಿಡಿಎಸ್‌ನಿಂದ ವಿನಾಯಿತಿ ನೀಡಲಾಗಿದೆ. ವಿಮೆ ಕಮಿಶನ್‌ನಲ್ಲಿ 20,000 ರುಪಾಯಿ ತನಕ ಟಿಡಿಎಸ್‌ ಇರುವುದಿಲ್ಲ. 20,000 ರುಪಾಯಿ ತನಕ ಬ್ರೋಕರೇಜ್‌ ಶುಲ್ಕದ ಮೇಲೆ ಟಿಡಿಎಸ್‌ ಇರುವುದಿಲ್ಲ.

ಏಪ್ರಿಲ್‌ 1ರಿಂದ 10 ಲಕ್ಷ ರುಪಾಯಿ ತನಕ ವಿದೇಶಿ ಮೂಲದ ಹಣ ಅಥವಾ ರೆಮಿಟೆನ್ಸ್‌ ಮೇಲೆ ಟಿಸಿಎಸ್‌ ತೆರಿಗೆ ಇರುವುದಿಲ್ಲ. 2025ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಈ ಘೋಷಣೆಯನ್ನು ಮಾಡಿದ್ದರು. ಇಲ್ಲಿಯತನಕ 50,000 ರುಪಾಯಿ ತನಕ ಬಡ್ಡಿ ಆದಾಯ ಮಿತಿ ಇತ್ತು. ಇತರ ಹೂಡಿಕೆದಾರರಿಗೆ ಬಡ್ಡಿ ಆದಾಯ ಮಿತಿಯನ್ನು 40,000 ರುಪಾಯಿಗಳಿಂದ 50,000 ರುಪಾಯಿಗೆ ಏರಿಸಲಾಗಿದೆ. ಬಾಡಿಗೆ ಆದಾಯದ ಮೇಲಿನ ಟಿಡಿಎಸ್‌ ಕಡಿತಕ್ಕೆ ಆದಾಯದ ಮಿತಿಯನ್ನೂ ಈಗಿನ ವಾರ್ಷಿಕ 2.4 ಲಕ್ಷ ರುಪಾಯಿಗಳಿಂದ 6 ಲಕ್ಷ ರುಪಾಯಿಗೆ ಏರಿಸಲಾಗಿದೆ.

ಕಳೆದ ಫೆಬ್ರವರಿ 1ರಂದು ಮಂಡನೆಯಾದ ಕೇಂದ್ರ ಬಜೆಟ್‌ನಲ್ಲಿ ಹೊಸ ಆದಾಯ ತೆರಿಗೆ ದರಗಳ ಶ್ರೇಣಿ ಅಥವಾ ಸ್ಲ್ಯಾಬ್‌ಗಳನ್ನು ಘೋಷಿಸಲಾಗಿದೆ. ಇದರಿಂದ ಮಧ್ಯಮ ವರ್ಷದ ಜನರಿಗೆ ತೆರಿಗೆಯಲ್ಲಿ ಉಳಿತಾಯವಾಗಲಿದೆ. ಪರಿಷ್ಕೃತ ತೆರಿಗೆ ಪದ್ಧತಿಯು 2025-26ರಲ್ಲಿ ಜನರು ಗಳಿಸುವ ಆದಾಯಕ್ಕೆ ಅನ್ವಯವಾಗಲಿದೆ. ವೈಯಕ್ತಿಕ ಆದಾಯ ತೆರಿಗೆಯಲ್ಲಿ ಟ್ಯಾಕ್ಸ್‌ ರಿಬೇಟ್‌ ಅನ್ನು 25,000 ರುಪಾಯಿಗಳಿಂದ 60,000 ರುಪಾಯಿಗೆ ಹೆಚ್ಚಿಸಿರುವುದರಿಂದ ವಾರ್ಷಿಕ 12 ಲಕ್ಷ ರುಪಾಯಿ ತನಕ ಆದಾಯ ಇರುವವರಿಗೆ ಆದಾಯ ತೆರಿಗೆ ಇರುವುದಿಲ್ಲ. ವೇತನದಾರರಿಗೆ 75,000 ರುಪಾಯಿಗಳ ಸ್ಟ್ಯಾಂಡರ್ಡ್‌ ಡಿಡಕ್ಷನ್‌ ಕೂಡ ಇರುವುದರಿಂದ ಅವರಿಗೆ 12 ಲಕ್ಷದ 75 ಸಾವಿರ ರುಪಾಯಿ ತನಕ ಇನ್‌ಕಮ್‌ ಟ್ಯಾಕ್ಸ್‌ ಇರುವುದಿಲ್ಲ. ಇದು ದೇಶದ ಕೋಟ್ಯಂತರ ಮಧ್ಯಮ ವರ್ಗದ ಜನರಿಗೆ ಬಹು ದೊಡ್ಡ ರಿಲೀಫ್‌ ಆಗಿದೆ.

2025-26ಕ್ಕೆ ಹೊಸ ಆದಾಯ ತೆರಿಗೆಯ ಶ್ರೇಣಿ ಹೀಗಿದೆ:

ವಾರ್ಷಿಕ 4 ಲಕ್ಷ ರುಪಾಯಿ ತನಕ ಆದಾಯಕ್ಕೆ, ಆದಾಯ ತೆರಿಗೆ ಇರುವುದಿಲ್ಲ.

4 ಲಕ್ಷದಿಂದ 8 ಲಕ್ಷ ರುಪಾಯಿ ಆದಾಯಕ್ಕೆ ತೆರಿಗೆ : 5%

8 ಲಕ್ಷದಿಂದ 12 ಲಕ್ಷ ರುಪಾಯಿ ಆದಾಯಕ್ಕೆ ತೆರಿಗೆ : 10%

12 ಲಕ್ಷದಿಂದ 16 ಲಕ್ಷ ರುಪಾಯಿ ಆದಾಯಕ್ಕೆ ತೆರಿಗೆ : 15%

20 ಲಕ್ಷದಿಂದ 24 ಲಕ್ಷ ರುಪಾಯಿ ಆದಾಯಕ್ಕೆ ತೆರಿಗೆ : 25%

24 ಲಕ್ಷ ರುಪಾಯಿ ಮೇಲಿನ ಆದಾಯಕ್ಕೆ ತೆರಿಗೆ : 30%

( ಹಳೆಯ ತೆರಿಗೆ ಪದ್ಧತಿಯಲ್ಲಿ ಹಳೆಯ ತೆರಿಗೆಯ ಶ್ರೇಣಿಯೇ ಇರಲಿದೆ)

ಜಿಎಸ್‌ಟಿ ಅಡಿಯಲ್ಲಿಯೂ ಏಪ್ರಿಲ್‌ 1ರಿಂದ ಬಿಸಿನೆಸ್‌ದಾರರಿಗೆ ಹೊಸ ಬದಲಾವಣೆ ಅನ್ವಯವಾಗಲಿದೆ. ಮುಖ್ಯವಾಗಿ ಇನ್‌ಪುಟ್‌ ಟ್ಯಾಕ್ಸ್‌ ಕ್ರೆಡಿಟ್‌ ಕ್ಲೇಮ್‌ ಮಾಡಿಕೊಳ್ಳಲು, ಇನ್‌ಪುಟ್‌ ಸರ್ವೀಸ್‌ ಡಿಸ್ಟ್ರಿಬ್ಯೂಟರ್‌ ಮೆಕಾನಿಸಮ್‌ ಅನ್ನು ಕಡ್ಡಾಯ ಮಾಡಲಾಗಿದೆ. ಏಪ್ರಿಲ್‌ 1ರಿಂದ ಎಟಿಎಂನಿಂದ ಕ್ಯಾಶ್‌ ವಿತ್‌ ಡ್ರಾವಲ್ಸ್‌ಗೆ ಸಂಬಂಧಿಸಿಯೂ ಹೊಸ ಬದಲಾವಣೆ ಜಾರಿಯಾಗಲಿದೆ.ಆರ್‌ಬಿಐ ಮತ್ತು ನ್ಯಾಶನಲ್‌ ಪೇಮೆಂಟ್ಸ್‌ ಬ್ಯಾಂಕ್‌ ಆಫ್‌ ಇಂಡಿಯಾ, ಎಟಿಎಂ ಇಂಟರ್‌ಚೇಂಜ್‌ ಶುಲ್ಕದಲ್ಲಿ 2 ರುಪಾಯಿ ಏರಿಕೆಗೆ ಅನುಮೋದಿಸಿದೆ. ಉಚಿತ ಟ್ರಾನ್ಸಕ್ಷಗಳ ಮಿತಿ ದಾಟಿದ ಬಳಿಕ ಪ್ರತಿ ಒಂದು ಕ್ಯಾಶ್‌ ವಿತ್‌ ಡ್ರಾವಲ್ಸ್‌ಗೆ 19 ರುಪಾಯಿ ಶುಲ್ಕವಾಗಲಿದೆ. ಹಣಕಾಸೇತರ ಟ್ರಾನ್ಸಕ್ಷನ್‌ಗಳಿಗೆ 7 ರುಪಾಯಿ ಶುಲ್ಕ ಅನ್ವಯವಾಗಲಿದೆ. ಆದರೆ ಈ ಬದಲಾವಣೆಯು ಮೈಕ್ರೊ-ಎಟಿಎಂಗಳಿಗೆ ಮತ್ತು ಕ್ಯಾಶ್‌ ಡೆಪಾಸಿಟ್‌ ಟ್ರಾನ್ಸಕ್ಷನ್‌ಗಳಿಗೆ ಇರುವುದಿಲ್ಲ. ಪ್ರತಿ ತಿಂಗಳು ಮೂರು ಸಲ ಮಾತ್ರ ಎಟಿಎಂನಿಂದ ಉಚಿತವಾಗಿ ನಗದು ಹಿಂಪಡೆಯಬಹುದು.

ಎಸ್‌ಬಿಐ, ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ ಮತ್ತು ಕೆನರಾ ಬ್ಯಾಂಕ್‌ ಏಪ್ರಿಲ್‌ 1ರಿಂದ ಮಿನಿಮಮ್‌ ಬ್ಯಾಲೆನ್ಸ್‌ ರೂಲ್ಸ್‌ಗಳನ್ನು ಬದಲಿಸುತ್ತಿದ್ದು, ನಗರ ಪ್ರದೇಶಗಳಲ್ಲಿ ಕನಿಷ್ಠ ಬ್ಯಾಲೆನ್ಸ್‌ ಮೊತ್ತದಲ್ಲಿ ಏರಿಕೆಯಾಗಲಿದೆ.

ಪ್ರಾಪರ್ಟಿ ಮಾರಾಟ ಏಪ್ರಿಲ್‌ 1ರ ಬಳಿಕ ಮಾಡಿ

ನೀವು ನಿಮ್ಮ ಪ್ರಾಪರ್ಟಿಯನ್ನು ಮಾರಾಟ ಮಾಡುವ ಪ್ಲಾನ್‌ ಮಾಡುತ್ತಿದ್ದರೆ, ಏಪ್ರಿಲ್‌ 1ರ ಬಳಿಕ ಮಾಡುವುದು ಉತ್ತಮ. ಏಕೆಂದರೆ ಕ್ಯಾಪಿಟಲ್‌ ಗೇನ್ಸ್‌ ಟ್ಯಾಕ್ಸ್‌ ಅನ್ನು ಮುಂದಿನ 2025-26ರ ಆರ್ಥಿಕ ವರ್ಷದ ಆಧಾರದಲ್ಲಿ ಲೆಕ್ಕಾಚಾರ ಮಾಡಲಾಗುತ್ತದೆ. ಇದರಿಂದಾಗಿ ಟ್ಯಾಕ್ಸ್‌ ಸೇವಿಂಗ್‌ ಇನ್ವೆಸ್ಟ್‌ಮೆಂಟ್‌ ಸಲುವಾಗಿ ಒಂದು ಇಡೀ ವರ್ಷದ ಸಮಯ ಸಿಗುತ್ತದೆ. ತೆರಿಗೆ ಪಾವತಿಸಲು ಒಂದು ವರ್ಷದ ಸಮಯ ಸಿಗುತ್ತದೆ.

ಬಜೆಟ್‌ ಪ್ರಕಾರ ಏಪ್ರಿಲ್‌ 1ರ ಬಳಿಕ ಎಲೆಕ್ಟ್ರಾನಿಕ್ಸ್‌ ಮತ್ತು ಮೊಬೈಲ್‌ ದರಗಳಲ್ಲಿ ಇಳಿಕೆಯಾಗಲಿದೆ. ಏಕೆಂದರೆ ಮೊಬೈಲ್‌ ಫೋನ್‌ ಉತ್ಪಾದನೆಯಲ್ಲಿ ಬಳಕೆಯಾಗುವ 28 ವಸ್ತುಗಳ ಸುಂಕ ಇಳಿಕೆಯಾಗಲಿದೆ. ಎಲ್‌ಇಡಿ, ಎಲ್‌ಸಿಡಿ ಟಿವಿ ಉತ್ಪಾದನೆ ಕುಸಿತ ಬಿಡಿ ಭಾಗಗಳ ಮೇಲಿನ ಸುಂಕ ತಗ್ಗಲಿದೆ. ಇವಿ ಬ್ಯಾಟರಿಗಳು ಮತ್ತು ಬಿಡಿ ಭಾಗಗಳ ಮೇಲಿನ ತೆರಿಗೆ ಇಳಿಯಲಿದೆ. ಬಜೆಟ್‌ ಪ್ರಕಾರ 36 ಕ್ರಿಟಿಕಲ್‌ ಔಷಧಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ.

ಏಪ್ರಿಲ್‌ 1ರಿಂದ ಬಹುತೇಕ ಬ್ರಾಂಡ್‌ಗಳ ಕಾರುಗಳ ದರದಲ್ಲಿ ಏರಿಕೆಯಾಗಲಿದೆ. ಕೇವಲ ಕಾರುಗಳು ಮಾತ್ರವಲ್ಲದೆ, ರಾಜ್ಯದಲ್ಲಿ ದ್ವಿ ಚಕ್ರ ವಾಹನ, ಆಟೊ ರಿಕ್ಷಾ ಖರೀದಿ ಕೂಡ ದುಬಾರಿಯಾಗಲಿದೆ.

ಕಾರು ಉತ್ಪಾದಕ- ದರ ಏರಿಕೆ ಎಷ್ಟು?

ಮಾರುತಿ ಸುಜುಕಿ- 4%

ಕಿಯಾ- 3%

ಹುಂಡೈ-3%

ಮಹೀಂದ್ರಾ-3%

ರೆನಾಲ್ಟ್‌ - 2%

ಕರ್ನಾಟಕದಲ್ಲಿ ಏಪ್ರಿಲ್‌ 1ರಿಂದ ಟೋಲ್‌ ದರಗಳಲ್ಲೂ 3-5% ಏರಿಕೆಯಾಗಲಿದೆ. ರಾಜ್ಯದಲ್ಲಿ 66 ಟೋಲ್‌ ಪ್ಲಾಜಾಗಳಿದ್ದು, ಬಹುತೇಕ ಎಲ್ಲ ಕಡೆಗಳಲ್ಲಿ 3ರಿಂದ 5% ತನಕ ಟೋಲ್‌ ಶುಲ್ಕ ಏರಿಕೆಯಾಗಲಿದೆ.

ರಾಜ್ಯ ಸರ್ಕಾರಿ' ನೌಕರರೇ ಗಮನಿಸಿ : ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಕೆ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯ ಸರ್ಕಾರಿ' ನೌಕರರೇ ಗಮನಿಸಿ : ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಕೆ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

2024 ಮತ್ತು 2025ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಉಲ್ಲೇಖಿತ ಸುತ್ತೋಲೆಯಲ್ಲಿ ನಾಮ ನಿರ್ದೇಶನಗಳನ್ನು ದಿನಾಂಕ: 28-04-2025 ರೊಳಗಾಗಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.

ಮುಂದುವರೆದು, ಸದರಿ ಸುತ್ತೋಲೆಯನ್ನು ಭಾಗಶ: ಪರಿಷ್ಕರಿಸಲು ತೀರ್ಮಾನಿಸಿ ಈ ಕೆಳಕಂಡಂತೆ ಕ್ರಮವಹಿಸುವಂತೆ ತಿಳಿಸಲಾಗಿದೆ.

1. 2024ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಲು 2023ನೇ ಕ್ಯಾಲೆಂಡರ್ ವರ್ಷದಲ್ಲಿ ಮಾಡಿರುವ ಉಪ ಕ್ರಮ / ಸಾಧನೆಯನ್ನು ಪರಿಗಣಿಸಲಾಗುವುದು. ಹಾಗೆಯೇ, 2025ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಲು 2024ನೇ ಕ್ಯಾಲೆಂಡರ್ ವರ್ಷದಲ್ಲಿ ಮಾಡಿರುವ ಉಪ ಕ್ರಮ /ಸಾಧನೆಯನ್ನು ಪರಿಗಣಿಸಲಾಗುವುದು.

2. 2024 ಹಾಗೂ 2025ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆನ್ಲೈನ್ನಲ್ಲಿ ನಾಮ ನಿರ್ದೇಶನವನ್ನು ಸಲ್ಲಿಸಲು ದಿನಾಂಕ: 14-04-2025 ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದೆ. ನಂತರ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ.

3. 2023ನೇ ಸಾಲಿನಲ್ಲಿ ಯಾವ ಜಿಲ್ಲೆಗಳು ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿಲ್ಲವೋ ಅವರೂ ಸಹ ಪ್ರಕ್ರಿಯೆಯನ್ನು ದಿನಾಂಕ: 16-04-2025 ರೊಳಗೆ ಪೂರ್ಣಗೊಳಿಸುವುದು ಮತ್ತು ಆಯ್ಕೆ ಪೂರ್ಣಗೊಂಡ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸುವುದು.

4. 2024 ಹಾಗೂ 2025ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯ ಆಯ್ಕೆಯನ್ನು ಪೂರ್ಣಗೊಳಿಸಿ, ಪೂರ್ಣಗೊಂಡ ಎರಡು ವರ್ಷಗಳ ಆಯ್ಕೆ ಪಟ್ಟಿಯನ್ನು ದಿನಾಂಕ: 16-04-2025ರೊಳಗೆ ಸರ್ಕಾರಕ್ಕೆ ಸಲ್ಲಿಸುವುದು.

5. 2024 ಹಾಗೂ 2025ನೇ ಸಾಲಿನ ಎರಡು ವರ್ಷಗಳಿಗೆ ಪ್ರತಿ ವರ್ಷಕ್ಕೆ ತಲಾ ಇಬ್ಬರಂತೆ ಒಟ್ಟು 4 ಜನ ಅರ್ಹ ಅಧಿಕಾರಿ / ನೌಕರರನ್ನು ಸರ್ವೋತ್ತಮ ಸೇವಾ ಪ್ರಶಸ್ತಿಗೆ ಪರಿಗಣಿಸಲು ಜಿಲ್ಲೆಯಿಂದ ರಾಜ್ಯಮಟ್ಟಕ್ಕೆ ನಾಮ ನಿರ್ದೇಶನಗಳನ್ನು ಸೂಕ್ತ ಶಿಫಾರಸ್ಸಿನೊಂದಿಗೆ ದಿನಾಂಕ: 16-04-2025 ರೊಳಗೆ ಸರ್ಕಾರಕ್ಕೆ ವಿಳಂಬವಿಲ್ಲದೇ ನಿಗದಿತ ನಮೂನೆಯಲ್ಲಿ ಕಡ್ಡಾಯವಾಗಿ ಸಲ್ಲಿಸುವುದು.

ಬೆಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇಲಾಖಾ ಹಂತ / ನಿರ್ದೇಶಕರ ಹಂತ ಮತ್ತು ಸಚಿವಾಲಯ ಹಂತದ ಅರ್ಹ ಅಧಿಕಾರಿ / ನೌಕರರು ಸಹ ಆನ್ಲೈನ್ ಮೂಲಕ ರಾಜ್ಯ ಮಟ್ಟದ ಪ್ರಶಸ್ತಿಗೆ ದಿನಾಂಕ:14-04-2025 ರೊಳಗೆ ನಾಮ ನಿರ್ದೇಶನಗಳನ್ನು ಸಲ್ಲಿಸಬಹುದು.

7. ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನವನ್ನು ಆನ್ಲೈನ್ ಮೂಲಕ ಸಲ್ಲಿಸುವ ಬಗ್ಗೆ ತಮ್ಮ ಜಿಲ್ಲೆಯಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳುವುದು.

8. ಮೇಲ್ಕಂಡ ಆಯ್ಕೆ ಪ್ರಕ್ರಿಯೆಯನ್ನು ಈ ಹಿಂದಿನ ಸುತ್ತೋಲೆಯಲ್ಲಿ ತಿಳಿಸಿರುವಂತೆ ಜಿಲ್ಲಾವಾರು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಅನುಮೋದನೆಯೊಂದಿಗೆ ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಡಳಿತ ಸುಧಾರಣೆ)ಗೆ ಸಲ್ಲಿಸುವುದು.

9. ಸರ್ಕಾರದ ಆದೇಶ ಸಂ: ಸಿಆಸುಇ (ಆಸು) 11 ಇಆಸು 2022, ದಿನಾಂಕ: 19-03-2022ರ ಮಾರ್ಗಸೂಚಿಗಳನ್ನು ಅನುಸರಿಸತಕ್ಕದ್ದು.

ಶುಕ್ರವಾರ, ಮಾರ್ಚ್ 28, 2025

ಯುಗಾದಿ ಹಬ್ಬಕ್ಕೆ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : 'ತುಟ್ಟಿ ಭತ್ಯೆ' ಶೇ.53ರಿಂದ 55ಕ್ಕೆ ಏರಿಕೆ | DA Hike ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ: 'ತುಟ್ಟಿಭತ್ಯೆ(DA)' ಶೇ.2ರಷ್ಟು ಹೆಚ್ಚಳ | Central Government Employees

ಕೇಂದ್ರ ಸರ್ಕಾರ ತನ್ನ ನೌಕರರ ವೇತನವನ್ನು ಶೇಕಡಾ 2 ರಷ್ಟು ಹೆಚ್ಚಿಸಿದೆ. ಈ ಹೆಚ್ಚಳವನ್ನು ತುಟ್ಟಿ ಭತ್ಯೆ (ಡಿಎ) ರೂಪದಲ್ಲಿ ಮಾಡಲಾಗಿದೆ. ಕೇಂದ್ರ ನೌಕರರ ತುಟ್ಟಿ ಭತ್ಯೆಯನ್ನು ವರ್ಷಕ್ಕೆ ಎರಡು ಬಾರಿ ಹೆಚ್ಚಿಸಲು ಸರ್ಕಾರ ಪರಿಗಣಿಸುತ್ತಿದೆ.


ಈ ಹೆಚ್ಚಳದೊಂದಿಗೆ, ಡಿಎ 53 ರಿಂದ 55 ಪ್ರತಿಶತಕ್ಕೆ ಹೆಚ್ಚಾಗುತ್ತದೆ.


ಈ ಹೆಚ್ಚಳವನ್ನು ಮೂಲ ವೇತನಕ್ಕೆ ಅನುಗುಣವಾಗಿ ಮಾಡಲಾಗುತ್ತದೆ. ಉದಾಹರಣೆಗೆ, ಒಬ್ಬ ಉದ್ಯೋಗಿಯ ಮೂಲ ವೇತನ 30,000 ರೂ. ಆಗಿದ್ದರೆ, ಅವರ ವೇತನವು ಶೇಕಡಾ 600 ರಷ್ಟು ಹೆಚ್ಚಾಗುತ್ತದೆ. ಒಬ್ಬರ ಸಂಬಳ 50,000 ರೂ.ಗಳಿದ್ದರೆ, ಅವರ ಸಂಬಳ 1000 ರೂ.ಗಳಷ್ಟು ಹೆಚ್ಚಾಗುತ್ತದೆ ಮತ್ತು 1 ಲಕ್ಷ ರೂ.ಗಳಷ್ಟು ಗಳಿಸುವವರ ಸಂಬಳ 2000 ರೂ.ಗಳಷ್ಟು ಹೆಚ್ಚಾಗುತ್ತದೆ.

ಸಂಬಳ ಎಷ್ಟು?
ಒಬ್ಬ ವ್ಯಕ್ತಿಯ ಮೂಲ ವೇತನ 50,000 ರೂ. ಎಂದು ಭಾವಿಸೋಣ. ಇಲ್ಲಿಯವರೆಗೆ ಅವರಿಗೆ ಶೇ. 53 ರಷ್ಟು ಡಿಎ ಸಿಗುತ್ತಿತ್ತು. 50,000 ರಲ್ಲಿ 53% ರೂ. 26,500 ಆಗಿದೆ. ಈಗ HRA ಆಗಿ 10,000 ರೂ.ಗಳನ್ನು ಊಹಿಸೋಣ. HRA ಹಲವು ಅಂಶಗಳನ್ನು ಅವಲಂಬಿಸಿರುತ್ತದೆ ಎಂದು ನಾವು ನಿಮಗೆ ಹೇಳೋಣ. ಅದನ್ನು ಇಲ್ಲಿ ಉದಾಹರಣೆಯಾಗಿ ಮಾತ್ರ ಹೇಳಲಾಗುತ್ತಿದೆ. ಆದ್ದರಿಂದ ಈ ಲೆಕ್ಕಾಚಾರದ ಪ್ರಕಾರ, ಇಲ್ಲಿಯವರೆಗೆ ಕೇಂದ್ರ ಸರ್ಕಾರಿ ನೌಕರರು 86500 ರೂ.ಗಳ ಸಂಬಳ ಪಡೆಯುತ್ತಿದ್ದರು.

ಈಗ ಡಿಎ ಶೇಕಡಾ 55 ಆಗಿದ್ದರೆ ಒಟ್ಟು ಸಂಬಳ 1000 ರೂ. ಹೆಚ್ಚಾಗುತ್ತದೆ. ಅಂದರೆ ಹೊಸ ಸಂಬಳ 87500 ರೂ. ಅದೇ ರೀತಿ, ಪಿಂಚಣಿದಾರರ ಪಿಂಚಣಿ ಕೂಡ ಹೆಚ್ಚಾಗುತ್ತದೆ.

ಡಿಎ ಎಂದರೇನು?
ಡಿಎ ಎಂದರೆ ಸರ್ಕಾರವು ತನ್ನ ಉದ್ಯೋಗಿಗಳಿಗೆ ನೀಡುವ ತುಟ್ಟಿ ಭತ್ಯೆ. ಹೆಚ್ಚುತ್ತಿರುವ ಹಣದುಬ್ಬರವನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ವರ್ಷಕ್ಕೆ ಎರಡು ಬಾರಿ ಇದನ್ನು ಪರಿಗಣಿಸುತ್ತದೆ. ಸಾಮಾನ್ಯವಾಗಿ ಇದನ್ನು ಶೇಕಡಾ 3-4 ರಷ್ಟು ಹೆಚ್ಚಿಸಲಾಗುತ್ತದೆ. ಆದ್ದರಿಂದ, ಈ ಬಾರಿ ಸರ್ಕಾರ ನಿರೀಕ್ಷೆಗಿಂತ ಕಡಿಮೆ ಡಿಎ ಹೆಚ್ಚಿಸಿದೆ ಎಂದು ಹೇಳಲಾಗುತ್ತಿದೆ. ಡಿಎ ಜೊತೆಗೆ, ಡಿಆರ್ ಅಂದರೆ ತುಟ್ಟಿ ಪರಿಹಾರವನ್ನು ಸಹ ಹೆಚ್ಚಿಸಲಾಗಿದೆ. ನಿವೃತ್ತ ನೌಕರರಿಗೆ ಡಿಆರ್ ನೀಡಲಾಗುತ್ತದೆ. ವೇತನ ಹೆಚ್ಚಳದಿಂದ ಸರ್ಕಾರಕ್ಕೆ 3622 ಕೋಟಿ ರೂಪಾಯಿಗಳ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ ಎಂದು ಸರ್ಕಾರ ಹೇಳಿದೆ. ಅದೇ ಸಮಯದಲ್ಲಿ, ಪಿಂಚಣಿ ಹೆಚ್ಚಳವು 2992 ಕೋಟಿ ರೂ.ಗಳ ಹೆಚ್ಚುವರಿ ಆರ್ಥಿಕ ಹೊರೆಗೆ ಕಾರಣವಾಗುತ್ತದೆ.

ಗುರುವಾರ, ಮಾರ್ಚ್ 27, 2025

8th Pay Commission: 8ನೇ ವೇತನ ಆಯೋಗ ಜಾರಿಯಾದ್ರೆ ನೌಕರರ ಸಂಬಳ ಎಷ್ಟು ಹೆಚ್ಚಳ? ಇಲ್ಲಿದೆ ಮಾಹಿತಿ

8th Pay Commission: 8ನೇ ವೇತನ ಆಯೋಗ ಜಾರಿಯಾದ್ರೆ ನೌಕರರ ಸಂಬಳ ಎಷ್ಟು ಹೆಚ್ಚಳ? ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರಿ ನೌಕರರಿಗೆ 8ನೇ ವೇತನ ಆಯೋಗ ರಚಿಸುವ ದಿಸೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಎಂಟನೇ ವೇತನ ಆಯೋಗ (8th Pay Commission) ರಚನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಮುಂದಿನ ವರ್ಷದ ಏಪ್ರಿಲ್ 1ರಿಂದ ಶಿಫಾರಸುಗಳು ಜಾರಿಗೆ ಬರಲಿವೆ.

ಇನ್ನು, 8ನೇ ವೇತನ ಆಯೋಗದ ಶಿಫಾರಸುಗಳು ಜಾರಿಗೆ ಬಂದರೆ ನೌಕರರ ಮಾಸಿಕ ಸಂಬಳ ಎಷ್ಟು ಜಾಸ್ತಿಯಾಗಬಹುದು ಎಂಬ ಚರ್ಚೆಗಳು ನಡೆಯುತ್ತಿವೆ.

ಇದರ ಬೆನ್ನಲ್ಲೇ, 8ನೇ ವೇತನ ಆಯೋಗದ ಕುರಿತು ಅಮೆರಿಕದ ಹೂಡಿಕೆ ಬ್ಯಾಂಕ್ ಆಗಿರುವ ಗೋಲ್ಡ್ ಮನ್ ಸಾಚ್ಸ್ ವರದಿ ಮಾಡಿದೆ. "8ನೇ ವೇತನ ಆಯೋಗದ ಶಿಫಾರಸುಗಳು ಜಾರಿಗೆ ಬಂದರೆ ಕೇಂದ್ರ ಸರ್ಕಾರಿ ನೌಕರರ ಮಾಸಿಕ ಸಂಬಳವು 19 ಸಾವಿರ ರೂ. ಹೆಚ್ಚಾಗಲಿದೆ" ಎಂದು ವರದಿ ತಿಳಿಸಿದೆ. ಇದರಿಂದ ಕೇಂದ್ರದ 50 ಲಕ್ಷ ನೌಕರರು ಹಾಗೂ 65 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಸ್ತುತ, ಮಧ್ಯಮ ಮಟ್ಟದ ಸರ್ಕಾರಿ ನೌಕರರ ವೇತನವು ತಿಂಗಳಿಗೆ ಸರಾಸರಿ 1 ಲಕ್ಷ ರೂ. (ತೆರಿಗೆ ಪೂರ್ವ) ಇದೆ. ಬಜೆಟ್ನಲ್ಲಿ 8ನೇ ವೇತನ ಆಯೋಗದ ಶಿಫಾರಸ್ಸುಗಳಿಗೆ ಮೀಸಲಿಡುವ ಹಣದ ಆಧಾರದ ಮೇಲೆ, ಕೇಂದ್ರ ಸರ್ಕಾರಿ ನೌಕರರ ಸಂಬಳ ಎಷ್ಟು ಪ್ರಮಾಣದಲ್ಲಿ ಹೆಚ್ಚಳವಾಗಲಿದೆ ಎಂಬುದನ್ನು ಗೋಲ್ಡ್ಮನ್ ಸಾಚ್ಸ್ ಅಂದಾಜಿಸಿದೆ.

ಇದರ ಪ್ರಕಾರ ಬಜೆಟ್ ನಲ್ಲಿ ಸರ್ಕಾರ 1.75 ಲಕ್ಷ ಕೋಟಿ ರೂ. ಮೀಸಲಿಟ್ಟರೆ, ಮಧ್ಯಮ ಮಟ್ಟದ ಕೇಂದ್ರ ಸರ್ಕಾರಿ ನೌಕರರ ಸಂಬಳ ತಿಂಗಳಿಗೆ 1,14,600 ರೂ.ಗೆ ಏರಿಕೆಯಾಗಬಹುದು. ಅದೇ ರೀತಿ 2 ಲಕ್ಷ ಕೋಟಿ ರೂ. ಮೀಸಲಿಟ್ಟರೆ, ಸಂಬಳವು ತಿಂಗಳಿಗೆ 1,16,700 ರೂ.ಗೆ ಹೆಚ್ಚಾಗಬಹುದು. ಇನ್ನು ಬಜೆಟ್ ನಲ್ಲಿ 2.25 ಲಕ್ಷ ಕೋಟಿ ರೂ. ಮೀಸಲಿಟ್ಟರೆ, ಕೇಂದ್ರ ನೌಕರರ ಸಂಬಳವು ತಿಂಗಳಿಗೆ 1,18,800 ರೂ. ಹೆಚ್ಚಾಗಬಹುದು ಎಂದು ವರದಿಯಲ್ಲಿ ಉಲ್ಲೇಖಿಸಿದೆ.

Government Employee: ಸಂಬಳ ಪ್ಯಾಕೇಜ್ ಖಾತೆ ಕಡ್ಡಾಯ, ಸರ್ಕಾರಿ ನೌಕರರ ಬೇಡಿಕೆಗಳು

'ಸಂಬಳ ಪ್ಯಾಕೇಜ್ ಖಾತೆಯನ್ನು ತೆರೆಯುವ ಸರ್ಕಾರಿ ನೌಕರರು ಸರ್ಕಾರದ ಮುಂದೆ ಹಲವು ಬೇಡಿಕೆಯನ್ನು ಇಟ್ಟಿದ್ದಾರೆ. ಇದಕ್ಕಾಗಿ ಬ್ಯಾಂಕ್‌ಗಳ ಜೊತೆ ಸಭೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಸರ್ಕಾರದ ಕಾರ್ಯದರ್ಶಿಗಳು, (ವಿತ್ತೀಯ ಸುಧಾರಣೆ) ಆರ್ಥಿಕ ಇಲಾಖೆ ಇವರಿಗೆ ಪತ್ರವನ್ನು ಬರೆದಿದ್ದಾರೆ. ಕರ್ನಾಟಕ ಸರ್ಕಾರ ಬ್ಯಾಂಕುಗಳ ಜೊತೆ ಸಭೆಯನ್ನು ಆಯೋಜಿಸಬೇಕು, ನೌಕರರ ಬೇಡಿಕೆಯನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.

ಸರ್ಕಾರಿ ನೌಕರರ ಬೇಡಿಕೆಗಳೇನು?: ಸರ್ಕಾರಿ ನೌಕರರ ಸಂಘದ ಪತ್ರವು ರಾಜ್ಯ ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್‌ ಖಾತೆಯಡಿ ಬ್ಯಾಂಕ್‌ಗಳು ನೀಡುತ್ತಿರುವ ಸೌಲಭ್ಯಗಳ ಜೊತೆಗೆ ಗೃಹ ಸಾಲ, ವೈಯಕ್ತಿಕ ಸಾಲಗಳನ್ನು ಕಡಿಮೆ ಬಡ್ಡಿ ದರದಲ್ಲಿ ನೀಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

ಪತ್ರದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯ ಸಚಿವ ಸಂಪುಟದ ತೀರ್ಮಾನದಂತೆ ರಾಜ್ಯ ಸರ್ಕಾರಿ ನೌಕರರು ಮತ್ತು ಅವಲಂಬಿತ ಕುಟುಂಬ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ವಿವಿಧ ಬ್ಯಾಂಕುಗಳು ಒದಗಿಸುವ ವಿಶಿಷ್ಟ ಸೌಲಭ್ಯಗಳನ್ನು ಪಡೆಯಲು ಸಹಕಾರಿಯಾಗುವಂತೆ ಸಂಬಳ ಪ್ಯಾಕೇಜ್‌ಗಳ ಅಡಿಯಲ್ಲಿ ಖಾತೆಗಳನ್ನು ತೆರೆಯುವುದು/ ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲಾ ಅಧಿಕಾರಿ ನೌಕರರಿಗೆ ಕಡ್ಡಾಯಗೊಳಿಸಲಾಗಿದೆ, ಇದು ಸ್ವಾಗತಾರ್ಹ.

ಮುಂದುವರೆದು, ಸಂಬಳ ಪ್ಯಾಕೇಜ್ ಖಾತೆಯಾಗಿ ಪರಿವರ್ತಿಸಿಕೊಳ್ಳುವ ಅಧಿಕಾರಿ/ ನೌಕರರಿಗೆ ಈ ಕೆಳಕಂಡ ಸಾಲಗಳನ್ನು ಕಡಿಮೆ ಬಡ್ಡಿ ದರದಲ್ಲಿ ನೀಡುವ ಸಂಬಂಧ ಚರ್ಚಿಸಲು ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್‌ಗಳ ಮುಖ್ಯಸ್ಥರೊಂದಿಗೆ ಹಾಗೂ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ಏರ್ಪಡಿಸಲು ತಮ್ಮಲ್ಲಿ ಕೋರಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಗೃಹ ಸಾಲ, ವೈಯಕ್ತಿಕ ಸಾಲ ಮತ್ತು ವಾಹನ ಖರೀದಿ ಸಾಲದ ಮೇಲೆ ಕಡಿಮೆ ಬಡ್ಡಿದರಗಳನ್ನು ನೀಡಬೇಕು ಎಂದು ಪತ್ರದಲ್ಲಿ ಬೇಡಿಕೆ ಸಲ್ಲಿಕೆ ಮಾಡಲಾಗಿದೆ. ಸರ್ಕಾರ ಬ್ಯಾಂಕುಗಳ ಜೊತೆ ಯಾವಾಗ ಸಭೆಯನ್ನು ಕರೆಯಲಿದೆ ಎಂದು ಕಾದು ನೋಡಬೇಕಿದೆ.

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಕಲಾಪದಲ್ಲಿ ಸರ್ಕಾರಿ ನೌಕರರ ಸಂಬಳ ಪ್ಯಾಕೇಜ್ ಕುರಿತು ಮಾಹಿತಿಯನ್ನು ನೀಡಿದ್ದರು. ಸರ್ಕಾರಿ ನೌಕರರ ಸಾಮಾಜಿಕ ಭದ್ರತೆಯು ಸರ್ಕಾರದ ಪ್ರಮುಖ ವಿಷಯವಾಗಿದ್ದು, ಈ ಕುರಿತು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಮುಂದಿನ ಮೂರು ತಿಂಗಳಿನಲ್ಲಿ ಎಲ್ಲಾ ಸರ್ಕಾರಿ ಅಧಿಕಾರಿ/ ನೌಕರರು ಸಂಬಳ ಪ್ಯಾಕೇಜ್ ಖಾತೆ ಕಡ್ಡಾಯವಾಗಿ ತೆರೆಯಬೇಕು ಎಂದು ಸೂಚನೆ ನೀಡಲಾಗಿತ್ತು.

ಸಂಬಳ ಪ್ಯಾಕೇಜ್ ಖಾತೆ ತೆರೆಯುವ ಸರ್ಕಾರಿ ನೌಕರ/ ಅಧಿಕಾರಿಗಳಿಗೆ ಬ್ಯಾಂಕುಗಳು ವಿವಿಧ ಸೌಲಭ್ಯವನ್ನು ನೀಡಲಿವೆ. ಸರ್ಕಾರದ ಎಲ್ಲಾ ನೌಕರರು/ ಅಧಿಕಾರಿಗಳು ಬ್ಯಾಂಕ್ ಮತ್ತು ಅಂಚೆ ಕಛೇರಿಗಳಲ್ಲಿ 'ಸಂಬಳ ಪ್ಯಾಕೇಜ್ ಖಾತೆ' ಕಡ್ಡಾಯವಾಗಿ ತೆರೆಯಬೇಕು. ಎಲ್ಲರೂ ಖಾತೆ ತೆರೆಯುವ ಕುರಿತು ಇಲಾಖೆಗಳ ಮುಖ್ಯಸ್ಥರು ಸಹ ನೋಡಿಕೊಳ್ಳಬೇಕು ಎಂದು ಆರ್ಥಿಕ ಇಲಾಖೆ ಆದೇಶದಲ್ಲಿ ತಿಳಿಸಿತ್ತು.

ವಿವಿಧ ಬ್ಯಾಂಕ್‌ಗಳು ಈಗಾಗಲೇ ಸಂಬಳ ಪ್ಯಾಕೇಜ್ ಖಾತೆಯ ಅಡಿಯಲ್ಲಿ ನೀಡುವ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡಿವೆ. ಸಂಬಳ ಪ್ಯಾಕೇಜ್‌ಗಳ ಅಡಿಯಲ್ಲಿ ಎಲ್ಲಾ ನೌಕರರು. (ಖಾಯಂ/ ಗುತ್ತಿಗೆ/ ಹೊರಗುತ್ತಿಗೆ ಇತ್ಯಾದಿ) ಖಾತೆಗಳನ್ನು ತೆರೆಯಲು/ ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

ರಾಜ್ಯ ಸರ್ಕಾರಿ' ನೌಕರರೇ ಗಮನಿಸಿ : ಪರಿಷ್ಕೃತ 'ಆರೋಗ್ಯ ಸಂಜೀವಿನಿ' ಯೋಜನೆ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ.!

ರಾಜ್ಯ ಸರ್ಕಾರಿ' ನೌಕರರೇ ಗಮನಿಸಿ : ಪರಿಷ್ಕೃತ 'ಆರೋಗ್ಯ ಸಂಜೀವಿನಿ' ಯೋಜನೆ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ.!

ಬುಧವಾರ, ಮಾರ್ಚ್ 26, 2025

`ರಾಜ್ಯ ಸರ್ಕಾರಿ ನೌಕರರೇ' ಗಮನಿಸಿ : `ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆ' ಬಗ್ಗೆ ಸರ್ಕಾರದಿಂದ ಮತ್ತೊಂದು ಆದೇಶ.

ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು ಒಪ್ಪಿಗೆಯನ್ನು ನೀಡಿ ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಸರ್ಕಾರಿ ಆದೇಶವನ್ನು ಹೊರಡಿಸಲಾಗಿರುತ್ತದೆ. ಈ ಆದೇಶದ ವ್ಯಾಪ್ತಿಗೊಳಪಡುವ ಸರ್ಕಾರಿ ನೌಕರರಿಂದ ದಿನಾಂಕ:30.06.2024ರೊಳಗ ಅಭಿಮತವನ್ನು ಪಡೆದು ಕ್ರೋಢೀಕೃತ ಪ್ರಸ್ತಾವನೆಯನ್ನು ಸರ್ಕಾರದ ಪರಿಶೀಲನೆಗಾಗಿ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿತ್ತು.

ಮುಂದುವರೆದು, ದಿನಾಂಕ:24.01.2024ರ ಸರ್ಕಾರಿ ಆದೇಶದನ್ವಯ ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಅಧಿಕಾರಿ/ನೌಕರರ ಎನ್‌.ಪಿ.ಎಸ್. ಪ್ರಾನ್ ಖಾತೆಯಲ್ಲಿ ಜಮೆಯಾಗಿರುವ ಸರ್ಕಾರದ ಹಾಗೂ ನೌಕರರ ವಂತಿಗೆಗಳನ್ನು ಹಿಂಪಡೆದು ಇತ್ಯರ್ಥಪಡಿಸಲು ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಸರ್ಕಾರಿ ಆದೇಶದಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.

ಅದರಂತೆ, ದಿನಾಂಕ: 24.01.2024ರ ಸರ್ಕಾರಿ ಆದೇಶದನ್ವಯ ಸಂಬಂಧಿತ ಅಧಿಕಾರಿ/ನೌಕರರು ಚಲಾಯಿಸಿದ ಅಭಿಮತವನ್ನು ಪರಿಶೀಲಿಸಿದ ಸರ್ಕಾರವು ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಕರ್ನಾಟಕ ಸರ್ಕಾರ ಸಚಿವಾಲಯ ಸೇವೆಗೆ ಸೇರಿದ ರಾಷ್ಟ್ರೀಯ ಪಿಂಚಣಿ ಯೋಜನೆಗೊಳಪಟ್ಟ ಅಧಿಕಾರಿ/ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 38 ಎಎಬಿ 2024, ಬೆಂಗಳೂರು, ದಿನಾಂಕ:20ನೇ ಮಾರ್ಚ್ 2025.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರ ಸಚಿವಾಲಯದ ಈ ಕೆಳಕಂಡ ಅಧಿಕಾರಿ / ನೌಕರರು ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿರುವುದರಿಂದ ದಿನಾಂಕ:24.01.2024ರ ಸರ್ಕಾರಿ ಆದೇಶ ಸಂಖ್ಯೆ: ಆಇ-ಪಿಇಎನ್/99/2023ರನ್ವಯ ಅವರನ್ನು ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಿ ಆದೇಶಿಸಿದೆ. ಸದರಿ ಅಧಿಕಾರಿ/ನೌಕರರಿಗೆ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಯ ನಿಯಮ 2-C ಅನ್ವಯವಾಗುವುದಿಲ್ಲ ಮತ್ತು ಇವರಿಗೆ ಅದೇ ನಿಯಮಾವಳಿಯ ನಾಲ್ಕನೇಯ ಭಾಗ ಅನ್ವಯವಾಗತಕ್ಕದ್ದು.

ಮಂಗಳವಾರ, ಮಾರ್ಚ್ 25, 2025

NEW BANKING RULES: ಎಟಿಎಂನಲ್ಲಿ ಕ್ಯಾಶ್ ವಿತ್​​ಡ್ರಾ ಶುಲ್ಕ ಹೆಚ್ಚಳ- ಶೀಘ್ರವೇ ಹೊಸ ಬ್ಯಾಂಕಿಂಗ್ ನಿಯಮಗಳು ಜಾರಿಗೆ

NEW BANKING RULES: ಎಟಿಎಂನಲ್ಲಿ ಕ್ಯಾಶ್ ವಿತ್​​ಡ್ರಾ ಶುಲ್ಕ ಹೆಚ್ಚಳ- ಶೀಘ್ರವೇ ಹೊಸ ಬ್ಯಾಂಕಿಂಗ್ ನಿಯಮಗಳು ಜಾರಿಗೆ


ನಿಮ್ಮ ಬ್ಯಾಂಕ್​ನದ್ದಲ್ಲದ ಎಟಿಎಂಗಳಲ್ಲಿ ನೀವು ತಿಂಗಳಿಗೆ 3 ರಿಂದ 5 ವಹಿವಾಟುಗಳನ್ನು ಮಾಡಬಹುದು. ಹಣ ವಿತ್​​ಡ್ರಾ ಆಗಬಹುದು ಅಥವಾ ಬೇರೆ ಟ್ರಾನ್ಸಾಕ್ಷನ್ ಕೂಡ ಆಗಿರಬಹುದು. ಈ ನಿಗದಿತ ಮಿತಿಯನ್ನು ಮೀರಿದರೆ ಶುಲ್ಕ ವಿಧಿಸಲಾಗುತ್ತದೆ. ಕ್ಯಾಷ್ ವಿತ್​ಡ್ರಾ ಮಾಡಿದರೆ ವಿಧಿಸುವ ಶುಲ್ಕವನ್ನು 17 ರೂನಿಂದ 19 ರೂಗೆ ಹೆಚ್ಚಿಸಲಾಗುತ್ತಿದೆ. ಅಕೌಂಟ್ ಬ್ಯಾಲೆನ್ಸ್ ಪರಿಶೀಲನೆ ಸೇರಿದಂತೆ ನಾನ್-ಟ್ರಾನ್ಸಾಕ್ಷನ್ ಶುಲ್ಕ 6 ರೂ ಇಂದ 7 ರೂ ಆಗುತ್ತದೆ.

ಎಸ್​​ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಕೆನರಾ ಬ್ಯಾಂಕ್ ಮೊದಲಾದ ಪ್ರಮುಖ ಬ್ಯಾಂಕುಗಳು ತಮ್ಮ ಮಿನಿಮಮ್ ಬ್ಯಾಲನ್ಸ್ ನಿಯಮಗಳನ್ನು ಪರಿಷ್ಕರಿಸುತ್ತಿವೆ. ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬೇರೆ ಬೇರೆ ಮಿನಿಮಮ್ ಬ್ಯಾಲನ್ಸ್ ನಿಯಮಗಳನ್ನು ಅಳವಡಿಸಲಾಗುತ್ತಿದೆ.

ಇದಲ್ಲದೆ ಸೇವಿಂಗ್ಸ್ ಬ್ಯಾಂಕ್ ಅಕೌಂಟ್​​​ಗಳಲ್ಲಿ ಹೆಚ್ಚು ಹಣ ಇದ್ದರೆ ಹೆಚ್ಚು ಬಡ್ಡಿದರ, ಕಡಿಮೆ ಹಣ ಇದ್ದರೆ ಕಡಿಮೆ ಬಡ್ಡಿದರ ನಿಗದಿ ಮಾಡಲಾಗುತ್ತಿದೆ. ಇನ್ನು ಎಸ್​​ಬಿಐ, ಐಡಿಎಫ್​​ಸಿ ಫಸ್ಟ್ ಬ್ಯಾಂಕ್ ಸೇಕಿ ಕೆಲ ಪ್ರಮುಖ ಬ್ಯಾಂಕುಗಳು ತಮ್ಮ ವಿಸ್ತಾರ ಕ್ರೆಡಿಟ್ ಕಾರ್ಡ್​​ಗಳ ನಿಯಮದಲ್ಲಿ ಬದಲಾವಣೆ ಮಾಡುತ್ತಿವೆ. ಟಿಕೆಟ್ ವೋಚರ್, ರಿನಿವಲ್ ಲಾಭ, ಮೈಲ್​​ಸ್ಟೋನ್ ರಿವಾರ್ಡ್ ಸೇರಿ ಇತರೆ ಉತ್ತೇಜಕ ಪ್ಲಾನ್​​ಗಳನ್ನು ಕೈಬಿಡಲಾಗುತ್ತಿದೆ.

ಸರ್ಕಾರಿ ನೌಕರರಿಗೆ 'ಸಂಬಳ ಪ್ಯಾಕೇಜ್‌' ಖಾತೆ ಕಡ್ಡಾಯ

ಸರ್ಕಾರಿ ನೌಕರರಿಗೆ 'ಸಂಬಳ ಪ್ಯಾಕೇಜ್‌' ಖಾತೆ ಕಡ್ಡಾಯ

ರಾಜ್ಯ ಸರ್ಕಾರದ ಎಲ್ಲ ನೌಕರರು, ಅಧಿಕಾರಿಗಳು ವಿವಿಧ ಬ್ಯಾಂಕ್‌ ಮತ್ತು ಅಂಚೆ ಕಚೇರಿಗಳಲ್ಲಿ 'ಸಂಬಳ ಪ್ಯಾಕೇಜ್‌' ಖಾತೆ ತೆರೆಯುವುದನ್ನು ಕಡ್ಡಾಯ ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.


ಸಂಬಳ ಪ್ಯಾಕೇಜ್‌ನ ಅಡಿಯಲ್ಲಿ ಖಾತೆ ಹೊಂದಿದ್ದರೆ ಅಂತಹ ನೌಕರರಿಗೆ ಬ್ಯಾಂಕ್‌ಗಳು ಕಡಿಮೆ ಬಡ್ಡಿ ದರದಲ್ಲಿ ವಸತಿ ಸಾಲ, ಉಚಿತ ರುಪೇ ಡೆಬಿಟ್‌-ಕ್ರೆಡಿಟ್‌ ಕಾರ್ಡ್‌, ಉಚಿತ ಡಿಮ್ಯಾಂಡ್‌ ಡ್ರಾಫ್ಟ್‌, ರಿಯಾಯತಿ ದರದಲ್ಲಿ ಲಾಕರ್‌ ಸೇವೆ ಒದಗಿಸುತ್ತಿವೆ.

ಈ ಅನುಕೂಲಗಳನ್ನು ಸರ್ಕಾರಿ ನೌಕರರು ಪಡೆದುಕೊಳ್ಳಬೇಕು ಎಂದು ಸೂಚಿಸಿದ್ದರೂ ಅನೇಕರು ಖಾತೆ ಆರಂಭಿಸದಿರುವುದು ಗಮನಕ್ಕೆ ಬಂದಿದೆ ಎಂದು ಇಲಾಖೆ ತಿಳಿಸಿದೆ.

ಜತೆಗೆ ಅತ್ಯಂತ ಕಡಿಮೆ ಮೊತ್ತಕ್ಕೆ ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ (ಟರ್ಮ್‌ ಇನ್ಸುರೆನ್ಸ್‌), ₹456ಕ್ಕೆ ₹2 ಲಕ್ಷ ಮೊತ್ತದ ಅಪಘಾತ ವಿಮೆ ಒದಗಿಸುತ್ತಿದೆ. ಇನ್ನಷ್ಟು ಅನುಕೂಲಗಳು ಈ ಖಾತೆಗಳಿಗೆ ಲಭ್ಯವಿದೆ. ಹೀಗಾಗಿ ಎಲ್ಲ ನೌಕರರು ಮೂರು ತಿಂಗಳ ಒಳಗೆ ಸಂಬಳ ಪ್ಯಾಕೇಜ್ ಖಾತೆ ತೆರೆಯಬೇಕು ಎಂದು ಸೂಚಿಸಿದೆ.

'ಎಲ್ಲ ನೌಕರರು ಈ ಸ್ವರೂಪದ ಬ್ಯಾಂಕ್‌ ಅಥವಾ ಅಂಚೆ ಕಚೇರಿಗಳಲ್ಲಿ ಖಾತೆ ಆಯ್ಕೆ ಮಾಡಿಕೊಳ್ಳುವಂತೆ ಕ್ರಮವಹಿಸುವುದು ಆಯಾ ಇಲಾಖೆಯ ಮುಖ್ಯಸ್ಥರ ಹೊಣೆಗಾರಿಕೆ ಆಗಿರುತ್ತದೆ. ಈ ಸಂಬಂಧ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಮತ್ತು ನೌಕರರನ್ನು ಪ್ರೋತ್ಸಾಹಿಸಬೇಕು' ಎಂದು ಆರ್ಥಿಕ ಇಲಾಖೆ ಸೂಚಿಸಿದೆ.

ಅದರಲ್ಲಿ ಹೆಸರು, ಹುದ್ದೆ, ಶಾಖೆಯ ಹೆಸರು, ಬ್ಯಾಂಕ್ ಖಾತೆಯ ವಿವರವನ್ನು ನಮೂದಿಸಬೇಕು.

ಇದಲ್ಲದೇ ನಾನು ಉಳಿತಾಯ ಖಾತೆಯನ್ನು ಈ ಬ್ಯಾಂಕ್ ನಲ್ಲಿ ಹೊಂದಿದ್ದೇನೆ. ಈ ಖಾತೆಯನ್ನು ವೇತನ ಖಾತೆಯಾಗಿ ಬದಲಾಯಿಸೋದಕ್ಕೆ, ತಮ್ಮ ಬ್ಯಾಂಕಿನ ಮೂಲಕ ಸಿಗುವ ವಿವಿಧ ಪ್ರಯೋಜನ ಪಡೆಯಲು ಇಚ್ಚಿಸುತ್ತೇನೆ ಎಂಬುದಾಗಿಯೂ ತಿಳಿಸಬೇಕು.

ಪ್ರಸ್ತುತ ರಾಜ್ಯ ಸರ್ಕಾರಿ ನೌಕರರೆಲ್ಲರೂ ತಮ್ಮ ಉಳಿತಾಯ ಖಾತೆಯನ್ನು ವೇತನ ಖಾತೆಯಾಗಿ ಬದಲಾಯಿಸಿಕೊಂಡು, ಸಂಬಂಳ ಪ್ಯಾಕೇಜ್ ಗಳ ಅಡಿಯಲ್ಲಿನ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರ ಆದೇಶಿಸಿರುತ್ತದೆ. ಹೀಗಾಗಿ ನನ್ನ ವೇತನ ಖಾತೆಯಾಗಿ ಬದಲಾಯಿಸೋದಕ್ಕೆ ಮನವಿಯನ್ನು ಮಾಡಬೇಕು.

ಉಳಿತಾಯ ಖಾತೆ, ವೇತನ ಖಾತೆಯಾಗಿ ಬದಲಾಯಿಸಲು ಈ ದಾಖಲೆ ಕಡ್ಡಾಯ

  1. ಇತ್ತೀಚಿನ ವೇತನ ಪಾವತಿ ಪ್ರತಿ
  2. ಬ್ಯಾಂಕ್ ಪಾಸ್ ಬುಕ್ ಮುಖ ಪುಟದ ಜೆರಾಕ್ಸ್ ಪ್ರತಿ
  3. ಸರ್ಕಾರಿ ನೌಕರರ ಆಧಾರ್ ಕಾರ್ಜ್ ನಕಲು ಪ್ರತಿ
  4. ಪ್ಯಾನ್ ಕಾರ್ಡ್ ನಕಲು ಪ್ರತಿ

ಈ ಮೇಲ್ಕಂಡ ದಾಖಲೆಗಳನ್ನು ಅರ್ಜಿಯ ಜೊತೆಗೆ ಸರ್ಕಾರಿ ನೌಕರರು ಹೊಂದಿರುವಂತ ಉಳಿತಾಯ ಖಾತೆಯ ಬ್ಯಾಂಕ್ ಗೆ ತೆರಳಿ ನೀಡಿದರೇ, ಅದನ್ನು ವೇತನ ಖಾತೆಯಾಗಿ ಅಂದರೇ ಸ್ಯಾಲರಿ ಅಕೌಂಟ್ ಆಗಿ ಬ್ಯಾಂಕ್ ಸಿಬ್ಬಂದಿ ಬದಲಾವಣೆ ಮಾಡಲಿದ್ದಾರೆ. ಆ ಮೂಲಕ ವೇತನ ಖಾತೆಯ ಅಡಿಯಲ್ಲಿ ಸಿಗುವಂತ ಕೆಲ ಪ್ರಯೋಜನಗಳು ಲಭ್ಯವಾಗುವಂತೆ ಆಗಲಿದೆ.


ರಾಜ್ಯದ ಸರ್ಕಾರಿ ನೌಕರರಿಗೆ 'ಸಂಬಳ ಪ್ಯಾಕೇಜ್ ಖಾತೆ' ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ.!



ಈ ಹಿನ್ನೆಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾಯ೯ ನಿವ೯ಹಿಸುತ್ತಿರುವ ಎಲ್ಲಾ ವೃಂದದ ಅಧಿಕಾರಿ/ಸಿಬ್ಬಂದಿಗಳು ಕಡ್ಡಾಯವಾಗಿ ಸಂಬಳ ಪ್ಯಾಕೇಜ್ ನೋಂದಾಯಿಸಲು ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವೃಂದದ ಅಧಿಕಾರಿ/ಸಿಬ್ಬಂದಿಗಳು ಕಡ್ಡಾಯವಾಗಿ ಸಂಬಳ ಖಾತೆಯನ್ನು ಸಂಬಳ ಪ್ಯಾಕೇಜ್ ಖಾತೆಯನ್ನಾಗಿ ಪರಿವರ್ತಿಸಲು/ನೋಂದಾಯಿಸಲು ಸೂಚಿಸಲಾಗಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ (01) ರ ಸರ್ಕಾರಿ ಆದೇಶದನ್ವಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವೃಂದದ ಅಧಿಕಾರಿ/ಸಿಬ್ಬಂದಿಗಳು ತಪ್ಪದೇ ತಮ್ಮ ಸಂಬಳ ಖಾತೆಯನ್ನು ಕಡ್ಡಾಯವಾಗಿ ಸಂಬಳ ಪ್ಯಾಕೇಜ್ ಖಾತೆಯನ್ನಾಗಿ ಬ್ಯಾಂಕ್ಗಳ ಮೂಲಕ ಪರಿವರ್ತಿಸಿಕೊಳ್ಳಲು/ನೋಂದಾಯಿಸಿಕೊಳ್ಳಲು ಸೂಚಿಸಲಾಗಿರುತ್ತದೆ. ಅದರಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಡಿಯಲ್ಲಿ ಬರುವ ಎಲ್ಲಾ ಹಂತದ ವೇತನ ಸೆಳೆಯುವ ಬಟಾವಡೆ ಅಧಿಕಾರಿಗಳು (ಡಿ ಡಿ ಒ) ತಕ್ಷಣದಿಂದಲೇ ಜಾರಿಗೆ ಬರುವಂತೆ ತಮ್ಮ ಅಧೀನದಲ್ಲಿ ಬರುವ ಕಛೇರಿ/ಆಸ್ಪತ್ರೆ (ಪ್ರಾ.ಆ.ಕೇಂದ್ರ /ಸ.ಆ.ಕೇಂದ್ರ/ ಸಾರ್ವಜನಿಕ ಆಸ್ಪತ್ರೆ/ ಎಂ.ಸಿ.ಹೆಚ್ /ಡಿ.ಹೆಚ್.ಒ/ ಟಿ.ಹೆಚ್.ಓ ಕಛೇರಿಗಳನ್ನೊಳಗೊಂಡಂತೆ) ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ಸಿಬ್ಬಂದಿಗಳ ಪ್ರಸ್ತುತ ಚಾಲ್ತಿಯಲ್ಲಿರುವ ಸಂಬಳ ಖಾತೆಗಳನ್ನು ಬ್ಯಾಂಕ್ಗಳ ಮೂಲಕ ಸಂಬಳ ಪ್ಯಾಕೇಜ್ ಖಾತೆಗಳನ್ನಾಗಿ ಕಡ್ಡಾಯವಾಗಿ ಪರಿವರ್ತಿಸಿಕೊಳ್ಳಲು ಈ ಮೂಲಕ ಸೂಚಿಸಲಾಗಿದೆ.

a) PMJJBY – ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆಯಡಿಯಲ್ಲಿ ವಾರ್ಷಿಕ ರೂ 436 ಪ್ರೀಮಿಯಂ ನಲ್ಲಿ ಅವಧಿ ವಿಮಾ (Term Insurance) ಯೋಜನ ಸೌಲಭ್ಯವಿರುತ್ತದೆ.
b) PMSBY ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿಯಲ್ಲಿ ವಾರ್ಷಿಕ ರೂ 20
ಪ್ರೀಮಿಯಂನಲ್ಲಿ ಅಪಘಾತ ವಿಮಾ (Accidental Insurance) ಯೋಜನೆ ಸೌಲಭ್ಯವಿರುತ್ತದೆ.
ಎಲ್ಲಾ ಡಿ.ಡಿ.ಒ ಅಧಿಕಾರಿಗಳು ಈ ಮೇಲ್ಕಂಡ ಸೌಲಭ್ಯಗಳ ಯೋಜನೆಗಳಡಿಯಲ್ಲಿ ತಮ್ಮ ಅಧೀನದಲ್ಲಿ ಬರುವ ಅಧಿಕಾರಿ/ಸಿಬ್ಬಂದಿಗಳು ಅರ್ಹತೆಗನುಸಾರ ನೋಂದಾಯಿಸಿಕೊಳ್ಳಲು ಕ್ರಮವಹಿಸುವಂತೆ ಈ ಮೂಲಕ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಲ್ಲೇಖ (1) ರ ಸರ್ಕಾರಿ ಆದೇಶವನ್ನು ಗಮನಿಸಬಹುದಾಗಿರುತ್ತದೆ. ಮುಂದುವರೆದು ಸದರಿ ಸರ್ಕಾರಿ ಆದೇಶವನ್ನು ಜಾರಿಗೊಳಿಸುವಲ್ಲಿ ವಿಳಂಬವಾದಲ್ಲಿ ಸಂಬಂಧಪಟ್ಟ ವೇತನ ಸೆಳೆಯುವ ಬಟಾವಡೆ ಅಧಿಕಾರಿಗಳು (ಡಿ ಡಿ ಒ) ಗಳನ್ನೇ ನೇರ ಹೊಣೆಗಾರರನ್ನಾಗಿಸಲಾಗುವುದೆಂದು ಈ ಮೂಲಕ ತಿಳಿಸಿದೆ.

ಸೋಮವಾರ, ಮಾರ್ಚ್ 24, 2025

MP Salary Hike: ಹಾಲಿ-ಮಾಜಿ ಸಂಸದರ ವೇತನ, ಭತ್ಯೆ, ಪಿಂಚಣಿ ಹೆಚ್ಚಳ: ಪರಿಷ್ಕೃತ ವೇತನ ಎಷ್ಟು?

MP Salary Hike: ಹಾಲಿ-ಮಾಜಿ ಸಂಸದರ ವೇತನ, ಭತ್ಯೆ, ಪಿಂಚಣಿ ಹೆಚ್ಚಳ: ಪರಿಷ್ಕೃತ ವೇತನ ಎಷ್ಟು?

ಕೇಂದ್ರ ಸರ್ಕಾರ ಸಂಸದರಿಗೆ ಸಂಸದರಿಗೆ ಯುಗಾದಿಗೂ ಮುನ್ನವೇ ಸಿಹಿಸುದ್ದಿ ಕೊಟ್ಟಿದೆ. ಸಂಸತ್ ಸದಸ್ಯರು (ಸಂಸದರು) ಮತ್ತು ಮಾಜಿ ಸಂಸತ್ ಸದಸ್ಯರ ವೇತನ, ದಿನಭತ್ಯೆ, ಪಿಂಚಣಿ ಹಾಗೂ ಹೆಚ್ಚುವರಿ ಪಿಂಚಣಿ ಮೊತ್ತವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಪರಿಷ್ಕೃತ ಹೆಚ್ಚಳವು ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ

ಯುಗಾದಿ ಸಂದರ್ಭದಲ್ಲೇ ಎಲ್ಲ ಸಂಸದರು ಹಾಗೂ ಮಾಜಿ ಸಂಸದರಿಗೆ ಕೇಂದ್ರ ಸರ್ಕಾರವು ಭರ್ಜರಿ ಗುಡ್‌ನ್ಯೂಸ್‌ ಕೊಟ್ಟಿದೆ. ಹಾಗಾದ್ರೆ ಸಂಸದರ ಪರಿಷ್ಕೃತ ವೇತನ ಎಷ್ಟು ಎಂಬುದನ್ನು ಇಲ್ಲಿ ತಿಳಿಯಿರಿ.

ಸಂಸದೀಯ ವ್ಯವಹಾರಗಳ ಸಚಿವಾಲಯವು ಸೋಮವಾರ ಹೊರಡಿಸಿದ ಅಧಿಸೂಚನೆಯಲ್ಲಿ ಈ ಬಗ್ಗೆ ಉಲ್ಲೇಖಿಸಿದೆ. ಏಪ್ರಿಲ್ 1, 2023ರಿಂದ ಜಾರಿಗೆ ಬರುವಂತೆ ಸಂಸದರು ಮತ್ತು ಮಾಜಿ ಸಂಸದರ ವೇತನ, ಭತ್ಯೆಗಳು ಮತ್ತು ಪಿಂಚಣಿಗಳಲ್ಲಿ ಶೇಕಡಾ 24ರಷ್ಟು ಹೆಚ್ಚಳ ಮಾಡಿರುವುದಾಗಿ ತಿಳಿಸಿದೆ. ಅದರಂತೆ ಸಂಸದರ ಮಾಸಿಕ ವೇತನವನ್ನು 1 ಲಕ್ಷ ರೂಪಾಯಿಗಳಿಂದ 1.24 ಲಕ್ಷ ರೂಪಾಯಿಗಳಿಗೆ ಪರಿಷ್ಕರಿಸಲಾಗಿದೆ. ಇದರೊಂದಿಗೆ ಅವರ ದೈನಂದಿನ ಭತ್ಯೆಗಳು ಮತ್ತು ಪಿಂಚಣಿ ಪ್ರಯೋಜನಗಳನ್ನು ಕೂಡ ಹೆಚ್ಚಿಸಲಾಗಿದೆ.

ಈ ಅಧಿಸೂಚನೆಯ ಪ್ರಕಾರ ಹಾಲಿ ಸಂಸದರ ದಿನಭತ್ಯೆಯನ್ನು 2,000 ರೂಪಾಯಿಗಳಿಂದ 2,500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಮಾಜಿ ಸಂಸದರು ಈಗ ತಿಂಗಳಿಗೆ 31,000 ರೂಪಾಯಿ ಪಿಂಚಣಿ ಪಡೆಯಲಿದ್ದು, ಈ ಹಿಂದೆ 25,000 ರೂಪಾಯಿ ಪಡೆಯುತ್ತಿದ್ದರು. ಇದರ ಜೊತೆಗೆ ಹೆಚ್ಚುವರಿಯಾಗಿ ಐದು ವರ್ಷಗಳನ್ನು ಮೀರಿ ಪ್ರತಿ ವರ್ಷ ಸೇವೆ ಸಲ್ಲಿಸಿದವರಿಗೆ ನೀಡಲಾಗುವ ಹೆಚ್ಚುವರಿ ಪಿಂಚಣಿಯನ್ನು ಕೂಡ ತಿಂಗಳಿಗೆ 2,000 ರೂಪಾಯಿಯಿಂದ 2,500 ರೂಪಾಯಿಗೆ ಹೆಚ್ಚಿಸಲಾಗಿದೆ.

ಸಂಸದರ ವೇತನ, ಭತ್ಯೆ ಮತ್ತು ಪಿಂಚಣಿ ಕಾಯ್ದೆಯಡಿ ಈ ಪರಿಷ್ಕರಣೆ ಮಾಡಲಾಗಿದೆ. ಇದು 1961ರ ಆದಾಯ ತೆರಿಗೆ ಕಾಯ್ದೆಯಲ್ಲಿ ನಿರ್ದಿಷ್ಟಪಡಿಸಿದ ವೆಚ್ಚ ಹಣದುಬ್ಬರ ಸೂಚ್ಯಂಕವನ್ನು ಆಧರಿಸಿದ್ದು, 2018ರ ಬಳಿಕ ಸಂಸದರ ವೇತನ ಮತ್ತು ಭತ್ಯೆಗಳಲ್ಲಿ ಇದು ಮೊದಲ ಪರಿಷ್ಕರಣೆಯಾಗಿದೆ.

ಸಂಸದರಿಗೆ ಏನೆಲ್ಲ ಭತ್ಯೆಗಳು ಸಿಗುತ್ತೆ?

2018ರಲ್ಲಿ ಕೊನೆಯ ಬಾರಿ ಸಂಸದರ ವೇತನ ಹಾಗೂ ಇನ್ನಿತರ ಭತ್ಯೆಗಳನ್ನು ಪರಿಷ್ಕರಿಸಲಾಗಿತ್ತು. ಆಗ ಸಂಸದರ ಮೂಲ ವೇತನವನ್ನು ತಿಂಗಳಿಗೆ 1 ಲಕ್ಷ ರೂಪಾಯಿ ಎಂದು ನಿಗದಿಪಡಿಸಲಾಗಿತ್ತು. ಇದರ ಜೊತೆಗೆ ಕಚೇರಿ ವೆಚ್ಚಗಳು ಮತ್ತು ಮತದಾರರೊಂದಿಗೆ ಸಂವಹನ ಸೇರಿ ಇತರೆ ಉದ್ದೇಶಗಳ ಖರ್ಚಿಗೆ 70,000 ರೂಪಾಯಿ ಕ್ಷೇತ್ರ ಭತ್ಯೆಯನ್ನು ಕೂಡ ನೀಡಲಾಗುತ್ತಿತ್ತು.

ಅಲ್ಲದೆ, ಸಂಸದರು ಫೋನ್ ಮತ್ತು ಇಂಟರ್ನೆಟ್ ಬಳಕೆಗೆ ವಾರ್ಷಿಕ ಭತ್ಯೆ, ತಮಗೆ ಮತ್ತು ಅವರ ಕುಟುಂಬಗಳಿಗೆ ವರ್ಷಕ್ಕೆ 34 ಉಚಿತ ದೇಶೀಯ ವಿಮಾನಗಳು, ಅನ್‌ಲಿಮಿಟೆಡ್‌ ಫಸ್ಟ್‌ ಕ್ಲಾಸ್‌ ರೈಲು ಪ್ರಯಾಣ ಮತ್ತು ರಸ್ತೆ ಪ್ರಯಾಣಕ್ಕಾಗಿ ಮೈಲೇಜ್ ಭತ್ಯೆ ಮುಂತಾದ ಹೆಚ್ಚುವರಿ ಸವಲತ್ತುಗಳನ್ನು ಸಹ ಸಂಸದರು ಪಡೆಯುತ್ತಾರೆ. ಸುಮಾರು 50,000 ಯೂನಿಟ್ ಉಚಿತ ವಿದ್ಯುತ್, ವಾರ್ಷಿಕವಾಗಿ 4,000 ಕಿಲೋಲೀಟರ್ ನೀರು, ನವದೆಹಲಿಯಲ್ಲಿ ಸರ್ಕಾರದಿಂದ ಒದಗಿಸಲಾದ ವಸತಿಯನ್ನು ಪಡೆಯುತ್ತಾರೆ. ಒಂದು ವೇಳೆ ಕೇಂದ್ರ ಸರ್ಕಾರದ ಅಧಿಕೃತ ವಸತಿಗಳಿಂದ ಹೊರಗುಳಿಯುವವರು ವಸತಿ ಭತ್ಯೆಯನ್ನು ಕೂಡ ಪಡೆಯಬಹುದು.

ಸಂಸದರು ಮತ್ತು ಮಾಜಿ ಸಂಸದರ ವೇತನ, ಪಿಂಚಣಿ ಮತ್ತು ಹೆಚ್ಚುವರಿ ಪಿಂಚಣಿಯನ್ನು ಪರಿಷ್ಕರಿಸುವುದಾಗಿ ಕೇಂದ್ರ ಸರ್ಕಾರ ಸೋಮವಾರ (ಮಾ.22) ಪ್ರಕಟಿಸಿದ್ದು, ಹಾಲಿ ಸಂಸದರ ವೇತನದಲ್ಲಿ ಶೇಕಡಾ 24ರಷ್ಟು ಹೆಚ್ಚಳವನ್ನು ಸೂಚಿಸಿದೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ, ಹಾಲಿ ಸದಸ್ಯರಿಗೆ ದೈನಂದಿನ ಭತ್ಯೆಗಳು ಮತ್ತು ಮಾಜಿ ಸದಸ್ಯರಿಗೆ ಐದು ವರ್ಷಗಳಲ್ಲಿ ಪ್ರತಿ ವರ್ಷದ ಸೇವೆಗೆ ಪಿಂಚಣಿ ಮತ್ತು ಹೆಚ್ಚುವರಿ ಪಿಂಚಣಿಯನ್ನು ಹೆಚ್ಚಿಸಲಾಗಿದೆ.

1961ರ ಆದಾಯ ತೆರಿಗೆ ಕಾಯ್ದೆಯಲ್ಲಿ ತಿಳಿಸಲಾದ ವೆಚ್ಚ ಹಣದುಬ್ಬರ ಸೂಚ್ಯಂಕದ ಆಧಾರದ ಮೇಲೆ ಸಂಸತ್ ಸದಸ್ಯರ ವೇತನ, ಭತ್ಯೆ ಮತ್ತು ಪಿಂಚಣಿ ಕಾಯ್ದೆಯಡಿ (Salary, Allowances and Pension of Members of Parliament Act) ನೀಡಲಾದ ಅಧಿಕಾರಗಳನ್ನು ಚಲಾಯಿಸುವ ಮೂಲಕ ವೇತನ ಹೆಚ್ಚಳದ ಅಧಿಸೂಚನೆ ಹೊರಡಿಸಲಾಗಿದೆ.

ಸಂಸದರಿಗೆ ವೇತನದಲ್ಲಿ ಏನೆಲ್ಲಾ ಬದಲಾವಣೆ?

  • ಮಾಸಿಕ ವೇತನ: ಸಂಸದರ ಮಾಸಿಕ ವೇತನವನ್ನು 1,00,000 ರೂ.ಗಳಿಂದ 1,24,000 ರೂ.ಗೆ ಹೆಚ್ಚಿಸಲಾಗಿದೆ.
  • ದೈನಂದಿನ ಭತ್ಯೆ: ದೈನಂದಿನ ಭತ್ಯೆಯನ್ನು (Daily Allowance) 2,000 ರೂ.ಗಳಿಂದ 2,500 ರೂ.ಗೆ ಹೆಚ್ಚಿಸಲಾಗಿದೆ.
  • ಪಿಂಚಣಿ: ಮಾಜಿ ಸಂಸದರ ಪಿಂಚಣಿಯನ್ನು ತಿಂಗಳಿಗೆ 25,000 ರೂ.ಗಳಿಂದ 31,000 ರೂ.ಗೆ ಹೆಚ್ಚಿಸಲಾಗಿದೆ.
  • ಐದು ವರ್ಷಗಳ ಸೇವೆಯ ಪ್ರತಿ ವರ್ಷದ ಹೆಚ್ಚುವರಿ ಪಿಂಚಣಿಯನ್ನು ತಿಂಗಳಿಗೆ 2,000 ರೂ.ಗಳಿಂದ 2,500 ರೂ.ಗೆ ಹೆಚ್ಚಿಸಲಾಗಿದೆ.

ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರವು ಮುಖ್ಯಮಂತ್ರಿ, ಸಚಿವರು ಮತ್ತು ಶಾಸಕರ ವೇತನವನ್ನು 100 ಪ್ರತಿಶತ ಹೆಚ್ಚಿಸಲು ಅನುಮೋದನೆ ನೀಡಿತ್ತು. ಇದಾದ ಕೆಲವೇ ದಿನಗಳ ಕೇಂದ್ರದಲ್ಲೂ ವೇತನ ಪರಿಷ್ಕರಣೆಯ ಸುದ್ದಿ ಬಂದಿದೆ. ಕರ್ನಾಟಕ ಸಚಿವರ ವೇತನ ಮತ್ತು ಭತ್ಯೆ (ತಿದ್ದುಪಡಿ) ಮಸೂದೆಯ ಪ್ರಕಾರ, ಮುಖ್ಯಮಂತ್ರಿಗಳ ಮಾಸಿಕ ವೇತನವನ್ನು 75,000 ರೂ.ಗಳಿಂದ 1.5 ಲಕ್ಷ ರೂ.ಗಳಿಗೆ ದ್ವಿಗುಣಗೊಳಿಸಲಾಗುತ್ತದೆ. ಸಚಿವರ ವೇತನವು 60,000 ರೂ.ಗಳಿಂದ 1.25 ಲಕ್ಷ ರೂ.ಗಳಿಗೆ, ಅಂದರೆ ಶೇ.108 ರಷ್ಟು ಹೆಚ್ಚಾಗಲಿದೆ.

| ಬೆಂಗಳೂರು ಕಚೇರಿಯಲ್ಲಿ 180 ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ ಅಮೆರಿಕದ ಬೋಯಿಂಗ್, ಜಾಗತಿಕವಾಗಿ ಉದ್ಯೋಗ ಕಡಿತ ಕೈಗೊಂಡ ಕಂಪನಿ


ಮುಖ್ಯಮಂತ್ರಿ, ಸಚಿವರು, ಶಾಸಕರ ವೇತನ ಹಾಗೂ ಭತ್ಯೆಯಲ್ಲಿ ಶೇ. 100 ಹೆಚ್ಚಳ ಮಾಡಿದ ಬೆನ್ನಲ್ಲೇ ಅತ್ತ ಸಂಸದರ ವೇತನವೂ ಭಾರಿ ಹೆಚ್ಚವಾಗಿದ್ದು, ಏಪ್ರಿಲ್ 1, 2023 ರಿಂದ ಪೂರ್ವಾನ್ವಯವಾಗುಂತೆ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ

ಸಂಸದೀಯ ವ್ಯವಹಾರಗಳ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ, ಹಾಲಿ ಸಂಸದರ ವೇತನವನ್ನು ಶೇ. 24 ರಷ್ಟು ಹೆಚ್ಚಿಸಲಾಗಿದೆ. ಅಲ್ಲದೆ ದಿನಭತ್ಯೆ ಮತ್ತು ಐದು ವರ್ಷಗಳಿಗಿಂತ ಹೆಚ್ಚಿನ ಸೇವೆ ಸಲ್ಲಿಸಿದ ಸಂಸದರಿಗೆ ಪ್ರತಿ ವರ್ಷದ ಪಿಂಚಣಿ ಮತ್ತು ಹೆಚ್ಚುವರಿ ಪಿಂಚಣಿಯನ್ನು ಹೆಚ್ಚಿಸಲಾಗಿದೆ.

ಸಂಸತ್ತಿನ ಸದಸ್ಯರು ಈಗ ತಿಂಗಳಿಗೆ 1 ಲಕ್ಷ ರೂ. ಪಡೆಯುತ್ತಿದ್ದು, ಇನ್ನು ಮುಂದೆ ತಿಂಗಳಿಗೆ 1.24 ಲಕ್ಷ ರೂ. ವೇತನ ಪಡೆಯಲಿದ್ದಾರೆ. ದಿನಭತ್ಯೆಯನ್ನು ಸಹ 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಮಾಜಿ ಸಂಸತ್ ಸದಸ್ಯರಿಗೆ ಪಿಂಚಣಿಯನ್ನು ತಿಂಗಳಿಗೆ 25,000 ರೂ.ಗಳಿಂದ 31,000 ರೂ.ಗಳಿಗೆ ಹೆಚ್ಚಿಸಲಾಗಿದೆ.

ಐದು ವರ್ಷಗಳಿಗಿಂತ ಹೆಚ್ಚಿನ ಸೇವೆ ಸಲ್ಲಿಸಿದ ಪ್ರತಿ ವರ್ಷಕ್ಕೆ ಹೆಚ್ಚುವರಿ ಪಿಂಚಣಿಯನ್ನು ತಿಂಗಳಿಗೆ 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗಿದೆ.


ಕೇಂದ್ರ ಸರ್ಕಾರವು 2023ರ ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಸಂಸತ್ತಿನ ಸದಸ್ಯರು ಮತ್ತು ಮಾಜಿ ಸದಸ್ಯರ ವೇತನ, ದಿನಭತ್ಯೆ, ಪಿಂಚಣಿ ಮತ್ತು ಹೆಚ್ಚುವರಿ ಪಿಂಚಣಿಯಲ್ಲಿ ಹೆಚ್ಚಳವನ್ನು ಅಧಿಕೃತವಾಗಿ ಪ್ರಕಟ ಮಾಡಿದೆ. ಈ ಬದಲಾವಣೆಯನ್ನು ಸಂಸತ್ತಿನ ಸದಸ್ಯರ ವೇತನ, ಭತ್ಯೆ ಮತ್ತು ಪಿಂಚಣಿ ಕಾಯ್ದೆ, 1954 ರ ಮೂಲಕ ಮಾಡಲಾಗಿದೆ ಮತ್ತು ಇದು ಆದಾಯ ತೆರಿಗೆ ಕಾಯ್ದೆ, 1961 ರಲ್ಲಿ ವಿವರಿಸಿರುವಂತೆ ವೆಚ್ಚ ಹಣದುಬ್ಬರ ಸೂಚ್ಯಂಕವನ್ನು ಆಧರಿಸಿದೆ.


ಪರಿಷ್ಕೃತ ವೇತನ ಈ ಕೆಳಗಿನಂತಿವೆ

ಸಂಬಳ: ಸಂಸತ್ ಸದಸ್ಯರ ಮಾಸಿಕ ವೇತನವನ್ನು 1,00,000 ರೂ.ಗಳಿಂದ 1,24,000 ರೂ.ಗಳಿಗೆ ಹೆಚ್ಚಿಸಲಾಗಿದೆ.

ದಿನಭತ್ಯೆ: ದಿನಭತ್ಯೆಯನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗಿದೆ.

ಪಿಂಚಣಿ: ಸದಸ್ಯರು ಮತ್ತು ಮಾಜಿ ಸಂಸತ್ ಸದಸ್ಯರ ಮಾಸಿಕ ಪಿಂಚಣಿಯನ್ನು 25,000 ರೂ.ಗಳಿಂದ 31,000 ರೂ.ಗಳಿಗೆ ಪರಿಷ್ಕರಿಸಲಾಗಿದೆ.

ಹೆಚ್ಚುವರಿ ಪಿಂಚಣಿ: ಮಾಜಿ ಸದಸ್ಯರು ತಮ್ಮ ಸೇವಾ ವರ್ಷಕ್ಕೆ ಅನುಗುಣವಾಗಿ ಹೆಚ್ಚುವರಿ ಪಿಂಚಣಿಯಲ್ಲಿ ಹೆಚ್ಚಳವನ್ನು ಕಾಣಲಿದ್ದಾರೆ.

ಕರ್ನಾಟಕ ಸರ್ಕಾರವು ಮುಖ್ಯಮಂತ್ರಿ, ಸಚಿವರು ಮತ್ತು ಶಾಸಕರಿಗೆ ಶೇ.100 ರಷ್ಟು ವೇತನ ಹೆಚ್ಚಳವನ್ನು ಅನುಮೋದಿಸಿದ ಕೆಲವು ದಿನಗಳ ನಂತರ ಈ ಕ್ರಮವು ವಿಧಾನಸಭೆಯಲ್ಲಿ ಬಿಸಿ ಚರ್ಚೆಗೆ ನಾಂದಿ ಹಾಡಿತು. ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇಕಡಾ ನಾಲ್ಕು ಮೀಸಲಾತಿ ನೀಡುತ್ತಿರುವ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್. ಅಶೋಕ ನೇತೃತ್ವದಲ್ಲಿ ಬಿಜೆಪಿ ಘೋಷಣೆಗಳನ್ನು ಕೂಗಿತು.

ಕರ್ನಾಟಕ ಸಚಿವರ ವೇತನ ಮತ್ತು ಭತ್ಯೆ (ತಿದ್ದುಪಡಿ) ಮಸೂದೆ 2025 ಮತ್ತು ಕರ್ನಾಟಕ ಶಾಸಕಾಂಗ ಸದಸ್ಯರ ವೇತನ, ಪಿಂಚಣಿ ಮತ್ತು ಭತ್ಯೆ (ತಿದ್ದುಪಡಿ) ಮಸೂದೆ 2025 ಎಂಬ ಎರಡು ತಿದ್ದುಪಡಿ ಮಸೂದೆಗಳ ಮೂಲಕ ವೇತನ ಹೆಚ್ಚಳದ ನಿರ್ಧಾರವನ್ನು ಅಂಗೀಕರಿಸಲಾಗಿದೆ.

Karnataka Assembly: ಶಾಸಕರು, ಸಚಿವರ ವೇತನ ಏರಿಕೆ ಮಸೂದೆ, ಚರ್ಚೆ ಇಲ್ಲದೇ ಫಟಾಫಟ್ ಪಾಸ್!

ಈ ನಿರ್ಧಾರವನ್ನು ಸಮರ್ಥಿಸಿಕೊಂಡ ಕರ್ನಾಟಕ ಗೃಹ ಸಚಿವ ಜಿ. ಪರಮೇಶ್ವರ, ಹೆಚ್ಚುತ್ತಿರುವ ವೆಚ್ಚಗಳು ಪ್ರಮುಖ ಅಂಶವೆಂದು ಉಲ್ಲೇಖಿಸಿದರು. "ಸಾಮಾನ್ಯ ಜನರೊಂದಿಗೆ ಶಾಸಕರ ಖರ್ಚು ಕೂಡ ಹೆಚ್ಚಾಗುತ್ತಿದೆ ಎಂದು ಸಮರ್ಥಿಸಿಕೊಂಡಿದ್ದರು. ಶಾಸಕರು ಮತ್ತು ಇತರರಿಂದ ಶಿಫಾರಸುಗಳು ಬಂದಿವೆ ಮತ್ತು ಅದಕ್ಕಾಗಿಯೇ ಮುಖ್ಯಮಂತ್ರಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಎಲ್ಲರೂ ಬದುಕುಳಿಯಬೇಕು ಮತ್ತು ಮುಖ್ಯಮಂತ್ರಿಗಳು ಈ ಹಣವನ್ನು ಯಾವುದಾದರೂ ಖಾತೆಯಿಂದ ನೀಡಲು ನಿರ್ವಹಿಸುತ್ತಾರೆ..." ಎಂದಿದ್ದರು.



ಸಂಸದರು, ಮಾಜಿ ಸಂಸದರ ವೇತನ, ಭತ್ಯೆ ಹೆಚ್ಚಳ: ಎಷ್ಟು ಗೊತ್ತಾ.? ಇಲ್ಲಿದೆ ಮಾಹಿತಿ


ಏಪ್ರಿಲ್ 1, 2023 ರಿಂದ ಜಾರಿಗೆ ಬರುವಂತೆ ಸಂಸದರು ಮತ್ತು ಮಾಜಿ ಸಂಸದರ ವೇತನ ಮತ್ತು ಇತರ ಭತ್ಯೆಗಳನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಸೋಮವಾರ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ.


ಸಂಸದರ ಮಾಸಿಕ ವೇತನವನ್ನು 1 ಲಕ್ಷ ರೂ.ಗಳಿಂದ 1.24 ಲಕ್ಷ ರೂ.ಗಳಿಗೆ ಮತ್ತು ದೈನಂದಿನ ಭತ್ಯೆಯನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗಿದೆ.

ಸಂಸದರು ಮತ್ತು ಮಾಜಿ ಸಂಸದರ ಮಾಸಿಕ ಪಿಂಚಣಿಯನ್ನು 25,000 ರೂ.ಗಳಿಂದ 31,000 ರೂ.ಗೆ ಪರಿಷ್ಕರಿಸಲಾಗಿದೆ. ಆದಾಯ ತೆರಿಗೆ ಕಾಯ್ದೆ, 1961 ರ ಅಡಿಯಲ್ಲಿ ವೆಚ್ಚ ಹಣದುಬ್ಬರ ಸೂಚ್ಯಂಕವನ್ನು ಆಧರಿಸಿ ಈ ಪರಿಷ್ಕರಣೆ ಮಾಡಲಾಗಿದೆ.

ಮಾರ್ಚ್ 21 ರಂದು ಸರ್ಕಾರದ ಅಧಿಸೂಚನೆ ಹೊರಡಿಸಲಾಗಿದ್ದರೂ, ಪರಿಷ್ಕೃತ ವೇತನ ಮತ್ತು ಭತ್ಯೆಗಳು ಏಪ್ರಿಲ್ 1, 2023 ರಿಂದ ಅನ್ವಯವಾಗುತ್ತವೆ.

"ಸಂಸತ್ ಸದಸ್ಯರ ವೇತನ, ಭತ್ಯೆಗಳು ಮತ್ತು ಪಿಂಚಣಿ ಕಾಯ್ದೆ, 1954 (1954 ರ 30) ರ ಸೆಕ್ಷನ್ 3 ರ ಉಪ-ವಿಭಾಗ (2) ಮತ್ತು ಸೆಕ್ಷನ್ 8 ಎ ಯ ಉಪ-ವಿಭಾಗ (1 ಎ) ಮೂಲಕ ನೀಡಲಾದ ಅಧಿಕಾರಗಳನ್ನು ಚಲಾಯಿಸುವ ಮೂಲಕ, ಕೇಂದ್ರ ಸರ್ಕಾರವು ಈ ಮೂಲಕ ಸದಸ್ಯರು ಮತ್ತು ಮಾಜಿ ಸಂಸತ್ ಸದಸ್ಯರ ವೇತನ, ದೈನಂದಿನ ಭತ್ಯೆ, ಪಿಂಚಣಿ ಮತ್ತು ಹೆಚ್ಚುವರಿ ಪಿಂಚಣಿಯನ್ನು ಹೆಚ್ಚಿಸಲು ಅಧಿಸೂಚನೆ ಹೊರಡಿಸುತ್ತದೆ. ಕಾಯ್ದೆ, 1961 (1961 ರ 43), 2023 ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ" ಎಂದು ಸರ್ಕಾರದ ಹೇಳಿಕೆ ತಿಳಿಸಿದೆ.

ಇದಲ್ಲದೆ, ಐದು ವರ್ಷಗಳಿಗಿಂತ ಹೆಚ್ಚಿನ ಸೇವೆಯ ಪ್ರತಿ ವರ್ಷಕ್ಕೆ ನೀಡಲಾಗುವ ಹೆಚ್ಚುವರಿ ಪಿಂಚಣಿಯನ್ನು ತಿಂಗಳಿಗೆ 2,000 ರೂ.ಗಳಿಂದ 2,500 ರೂ.ಗೆ ಪರಿಷ್ಕರಿಸಲಾಗಿದೆ.


60 ವರ್ಷದ ಹಿಂದೆ 500 ರೂ, ಈಗ ಸಂಸದರ ತಿಂಗಳ ಸಂಬಳ ಎಷ್ಟಾಗಿದೆ?


ಭಾರತ ದೇಶದಲ್ಲಿ ಎಂಪಿಗಳಿಗೆ ಎಷ್ಟು ಸಂಬಳ ಬರುತ್ತೆ? ಯಾವ ರೀತಿಯ ಇತರ ಭತ್ಯೆಗಳು ಇರುತ್ತವೆ? 

ವೆಚ್ಚದ ಹಣದುಬ್ಬರ ಸೂಚ್ಯಂಕದ ಆಧಾರದ ಮೇಲೆ ಸಂಬಳ ಹೆಚ್ಚಿಸಿದ್ದಾರೆ. ಎಂಪಿಗಳ ಸಂಬಳ 24% ಹೆಚ್ಚಳವಾಗಿದೆ. ಈಗ ರೂ. 1.24 ಲಕ್ಷಕ್ಕೆ ಏರಿಕೆಯಾಗಿದೆ. ಎಂಪಿಗಳ ದಿನಭತ್ಯೆಯನ್ನು ಕೂಡ ಹೆಚ್ಚಿಸಿದ್ದಾರೆ. ಈ ಹಿಂದೆ ದಿನಕ್ಕೆ ರೂ. 2 ಸಾವಿರ ಇತ್ತು, ಈಗ ರೂ. 2500ಕ್ಕೆ ಹೆಚ್ಚಿಸಿದ್ದಾರೆ. ಮಾಜಿ ಸಂಸತ್ ಸದಸ್ಯರಿಗೆ ನೀಡುವ ಪಿಂಚಣಿ ಮೊತ್ತವನ್ನು ಕೂಡ ಹೆಚ್ಚಿಸಿದ್ದಾರೆ. ಈ ಹಿಂದೆ ಈ ಪಿಂಚಣಿ ಮೊತ್ತ 25 ಸಾವಿರ ರೂಪಾಯಿ ಇತ್ತು. ಅದನ್ನು ಈಗ ರೂ. 31 ಸಾವಿರಕ್ಕೆ ಹೆಚ್ಚಿಸುತ್ತಿರುವುದಾಗಿ ನೋಟಿಫಿಕೇಶನ್‌ನಲ್ಲಿ ತಿಳಿಸಿದ್ದಾರೆ.

ಪ್ರತಿ 5 ವರ್ಷಗಳಿಗೊಮ್ಮೆ

ಎಂಪಿಗಳ ಸಂಬಳ ಭತ್ಯೆಗಳನ್ನು ಪ್ರತಿ 5 ವರ್ಷಗಳಿಗೊಮ್ಮೆ ಪರಿಶೀಲಿಸುತ್ತೇವೆ ಎಂದು 2018ರಲ್ಲಿ ಮೋದಿ ಸರ್ಕಾರ ಘೋಷಿಸಿತ್ತು. ಅದಕ್ಕೆ ಅನುಗುಣವಾಗಿಯೇ ಈಗ ಎಂಪಿಗಳ ವೇತನವನ್ನು ಹೆಚ್ಚಿಸಿ ಆದೇಶ ಹೊರಡಿಸಿದ್ದಾರೆ. 1966ರಲ್ಲಿ ಎಂಪಿಗಳ ಸಂಬಳ ಕೇವಲ ರೂ. 500 ಮಾತ್ರ ಇತ್ತು. ಆದರೆ ಈಗ ಅದು ರೂ. 1.24 ಲಕ್ಷಕ್ಕೆ ತಲುಪಿದೆ.

ಎಷ್ಟೋ ಭತ್ಯೆಗಳು ಕೂಡ..

ಕೇವಲ ಸಂಬಳಕ್ಕೆ ಮಾತ್ರ ಸೀಮಿತವಾಗದೆ ಎಂಪಿಗಳಿಗೆ ಇತರ ಭತ್ಯೆಗಳು ಕೂಡ ಲಭಿಸುತ್ತವೆ. ಇದರಲ್ಲಿ ವಿಮಾನ ಪ್ರಯಾಣ, ರೈಲ್ವೆ, ನೀರು, ವಿದ್ಯುತ್ ಚಾರ್ಜ್‌ಗಳು ಇತ್ಯಾದಿ ಇರುತ್ತವೆ. ಎಂಪಿಗಳಿಗೆ ವಾರ್ಷಿಕವಾಗಿ ರೂ. 4.8 ಲಕ್ಷ ವಿಮಾನ ಪ್ರಯಾಣ ಭತ್ಯೆ ನೀಡುತ್ತಾರೆ. ಅದೇ ರೀತಿ ಕ್ಷೇತ್ರ ಭತ್ಯೆಯ ಅಡಿಯಲ್ಲಿ ತಿಂಗಳಿಗೆ ರೂ. 87,000 ಸಿಗುತ್ತದೆ. ಉಚಿತ ರೈಲು ಪಾಸ್ ಸೌಕರ್ಯ ಇರುತ್ತದೆ. 50,000 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ಬಳಸಿಕೊಳ್ಳಬಹುದು. 4 ಲಕ್ಷ ಲೀಟರ್ ಉಚಿತ ನೀರು ಪಡೆಯಬಹುದು. ಫೋನ್, ಇಂಟರ್ನೆಟ್ ಚಾರ್ಜ್‌ಗಳಿಗಾಗಿ ವಾರ್ಷಿಕವಾಗಿ ವಿಶೇಷವಾಗಿ ಭತ್ಯೆಗಳು ಲಭಿಸುತ್ತವೆ.

ಸಂಬಳವಲ್ಲದೆ ಎಂಪಿಗಳಿಗೆ ಭತ್ಯೆಗಳ ರೂಪದಲ್ಲಿ ತಿಂಗಳಿಗೆ ಸುಮಾರು ರೂ. 1,51,833 ಸಿಗುತ್ತದೆ. ಈ ಲೆಕ್ಕದಲ್ಲಿ ಸಂಬಳದೊಂದಿಗೆ ಸೇರಿಸಿದರೆ ಒಂದು ಎಂಪಿಯ ಸಂಬಳ ತಿಂಗಳಿಗೆ ಸುಮಾರು ರೂ. 2.9 ಲಕ್ಷಕ್ಕಿಂತ ಹೆಚ್ಚಾಗುತ್ತದೆ. ಹೀಗಿರುವಾಗ ಎಂಪಿಗಳು ಪಡೆಯುವ ಸಂಬಳದ ಮೇಲೆ ಯಾವುದೇ ತೆರಿಗೆ ಇರುವುದಿಲ್ಲ. ಇದಕ್ಕೆ ಹೆಚ್ಚುವರಿಯಾಗಿ ಎಂಪಿ ಹೆಂಡತಿಯರಿಗೆ ವರ್ಷಕ್ಕೆ 34 ಉಚಿತ ವಿಮಾನ ಪ್ರಯಾಣಗಳು ಲಭಿಸುತ್ತವೆ. ಸಂಸತ್ ಸಭೆಗಳ ಸಮಯದಲ್ಲಿ ಎಂಪಿಗಳಿಗೆ 8 ಉಚಿತ ವಿಮಾನ ಪ್ರಯಾಣಗಳು ಲಭಿಸುತ್ತವೆ.


ಸರ್ಕಾರ ಮಾಡಿದ ವೇತನ ಹೆಚ್ಚಳದ ಈ ನಿರ್ಧಾರ ಪರವಿರೋಧಕ್ಕೂ ಕಾರಣವಾಗಿತ್ತು. ಇದೀಗ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೂಡ ಸಂಸತ್ ಸದಸ್ಯರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಸತ್ ಸದಸ್ಯರ ವೇತನವನ್ನು 24% ಹೆಚ್ಚಿಸಿದ್ದು, ಹೊಸ ವೇತನವು ಎರಡು ವರ್ಷಗಳ ಹಿಂದೆ ಅಂದರೆ, ಏಪ್ರಿಲ್ 1, 2023 ರಿಂದಲೇ ಜಾರಿಗೆ ಬರುವಂತೆ ಅಧಿಸೂಚನೆ ಹೊರಡಿಸಲಾಗಿದೆ. ಇದರೊಂದಿಗೆ, ಕೆಲವು ಭತ್ಯೆಗಳು ಮತ್ತು ಸೌಲಭ್ಯಗಳನ್ನು ಹೊರತುಪಡಿಸಿ ಸಂಸದರ ಮಾಸಿಕ ವೇತನವು ಬರೋಬ್ಬರಿ 1.24 ಲಕ್ಷ ರೂ.ಗಳಿಗೆ ಏರಿಕೆಯಾಗಿದೆ.

ಸಂಸದೀಯ ವ್ಯವಹಾರಗಳ ಸಚಿವಾಲಯ ಸೋಮವಾರ ಹೊರಡಿಸಿದ ಅಧಿಸೂಚನೆಯಲ್ಲಿ, ಸಂಸದರ ಮಾಸಿಕ ವೇತನವನ್ನು 1 ಲಕ್ಷ ರೂ.ಗಳಿಂದ 1.24 ಲಕ್ಷ ರೂ.ಗಳಿಗೆ ಪರಿಷ್ಕರಿಸಲಾಗಿದೆ ಮತ್ತು ಅವರ ದೈನಂದಿನ ಭತ್ಯೆಗಳು ಮತ್ತು ಪಿಂಚಣಿ ಪ್ರಯೋಜನಗಳನ್ನು ಸಹ ಹೆಚ್ಚಿಸಲಾಗಿದೆ ಎಂದು ತಿಳಿಸಲಾಗಿದೆ.

ಅಧಿಸೂಚನೆಯ ಪ್ರಕಾರ, ಹಾಲಿ ಸಂಸದರ ದೈನಂದಿನ ಭತ್ಯೆಯನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗಿದೆ. ಮಾಜಿ ಸಂಸದರು ಈಗ ತಿಂಗಳಿಗೆ 31,000 ರೂ.ಗಳ ಪಿಂಚಣಿ ಪಡೆಯುತ್ತಾರೆ, ಇದು ಹಿಂದಿನ 25,000 ರೂ.ಗಳಿಂದ ಹೆಚ್ಚಾಗಿದೆ. ಹೆಚ್ಚುವರಿಯಾಗಿ, ಐದು ವರ್ಷಗಳನ್ನು ಮೀರಿದ ಪ್ರತಿ ವರ್ಷ ಸೇವೆ ಸಲ್ಲಿಸಿದವರಿಗೆ ನೀಡಲಾಗುವ ಹೆಚ್ಚುವರಿ ಪಿಂಚಣಿಯನ್ನು ತಿಂಗಳಿಗೆ ರೂ. 2,000 ರಿಂದ ರೂ. 2,500 ಕ್ಕೆ ಹೆಚ್ಚಿಸಲಾಗಿದೆ.

ಈ ಪರಿಷ್ಕರಣೆಯನ್ನು 'ಸಂಸದರ ವೇತನ, ಭತ್ಯೆ ಮತ್ತು ಪಿಂಚಣಿ ಕಾಯ್ದೆ'ಯ ಅಡಿಯಲ್ಲಿ ಕೈಗೊಳ್ಳಲಾಗಿದ್ದು, ಇದು 1961 ರ ಆದಾಯ ತೆರಿಗೆ ಕಾಯ್ದೆಯಲ್ಲಿ ನಿರ್ದಿಷ್ಟಪಡಿಸಿದ ವೆಚ್ಚ ಹಣದುಬ್ಬರ ಸೂಚ್ಯಂಕವನ್ನು ಆಧರಿಸಿದೆ . 2018 ರಿಂದ ಸಂಸದರ ವೇತನ ಮತ್ತು ಭತ್ಯೆಗಳಲ್ಲಿ ಇದು ಮೊದಲ ಪರಿಷ್ಕರಣೆಯಾಗಿದೆ.

ಕೊನೆಯ ಪರಿಷ್ಕರಣೆಯಲ್ಲಿ, ಸಂಸದರ ಮೂಲ ವೇತನವನ್ನು ತಿಂಗಳಿಗೆ ರೂ. 1,00,000 ಎಂದು ನಿಗದಿಪಡಿಸಲಾಗಿದೆ, ಜೊತೆಗೆ ಕಚೇರಿ ವೆಚ್ಚಗಳು ಮತ್ತು ಮತದಾರರ ಸಂವಹನಗಳನ್ನು ಭರಿಸಲು ರೂ. 70,000 ಕ್ಷೇತ್ರ ಭತ್ಯೆಯನ್ನು ನೀಡಲಾಗುತ್ತದೆ. ಸಂಸದರು ಫೋನ್ ಮತ್ತು ಇಂಟರ್ನೆಟ್ ಬಳಕೆಗೆ ವಾರ್ಷಿಕ ಭತ್ಯೆ, ತಮಗೆ ಮತ್ತು ಅವರ ಕುಟುಂಬಗಳಿಗೆ ವರ್ಷಕ್ಕೆ 34 ಉಚಿತ ದೇಶೀಯ ವಿಮಾನಗಳು, ಅನಿಯಮಿತ ಪ್ರಥಮ ದರ್ಜೆ ರೈಲು ಪ್ರಯಾಣ ಮತ್ತು ರಸ್ತೆ ಪ್ರಯಾಣಕ್ಕಾಗಿ ಮೈಲೇಜ್ ಭತ್ಯೆ ಮುಂತಾದ ಹೆಚ್ಚುವರಿ ಸವಲತ್ತುಗಳನ್ನು ಸಹ ಪಡೆಯುತ್ತಾರೆ.

ಇದರ ಜೊತೆಗೆ ಅವರು 50,000 ಉಚಿತ ಯೂನಿಟ್ ವಿದ್ಯುತ್, ವಾರ್ಷಿಕವಾಗಿ 4,000 ಕಿಲೋಲೀಟರ್ ನೀರು ಮತ್ತು ನವದೆಹಲಿಯಲ್ಲಿ ಸರ್ಕಾರದಿಂದ ಒದಗಿಸಲಾದ ವಸತಿಗೆ ಅರ್ಹರಾಗಿದ್ದಾರೆ. ಅಧಿಕೃತ ವಸತಿಗಳಿಂದ ಹೊರಗುಳಿಯುವವರು ವಸತಿ ಭತ್ಯೆಯನ್ನು ಸಹ ಪಡೆಯಬಹುದು.

ವಿಶ್ವದ ಅಗ್ರ 10 ದೇಶಗಳ ಸಂಸದರ ವೇತನ ಭಾರತಕ್ಕಿಂತ ಸಾಕಷ್ಟು ಭಿನ್ನವಾಗಿದೆ. ಈ ದೇಶಗಳಲ್ಲಿ ಸಂಬಳದ ಜೊತೆಗೆ ಸೌಲಭ್ಯಗಳನ್ನು ಸಹ ವಿಭಿನ್ನ ರೀತಿಯಲ್ಲಿ ಒದಗಿಸಲಾಗುತ್ತದೆ. ಆ ವಿವರ ಇಲ್ಲಿದೆ


  • ಅಮೆರಿಕ: ಅಮೆರಿಕದ ಸಂಸದರು ವಾರ್ಷಿಕವಾಗಿ ಸುಮಾರು 1.45 ಕೋಟಿ ರೂ. ($174,000) ಪಡೆಯುತ್ತಾರೆ. ಅವರಿಗೆ ಉಚಿತ ವಸತಿ ಸಿಗುವುದಿಲ್ಲ, ಆದರೆ ಕಚೇರಿ ಮತ್ತು ಪ್ರಯಾಣಕ್ಕಾಗಿ ಪ್ರತ್ಯೇಕ ಬಜೆಟ್ ನೀಡಲಾಗುತ್ತದೆ.

  • ಇಂಗ್ಲೆಂಡ್: ಬ್ರಿಟಿಷ್ ಸಂಸದರ ವೇತನ ವಾರ್ಷಿಕವಾಗಿ ಸುಮಾರು 78 ಲಕ್ಷ ರೂ. (93,904 ಪೌಂಡ್). ಅವರಿಗೆ ಮನೆ ಬಾಡಿಗೆ ಭತ್ಯೆ ಸಿಗುತ್ತದೆ ಆದರೆ ಉಚಿತ ವಸತಿ ಸಿಗುವುದಿಲ್ಲ.

  • ಜಪಾನ್: ಜಪಾನ್ ಸಂಸದರು ವಾರ್ಷಿಕವಾಗಿ ಸುಮಾರು 1.5 ಕೋಟಿ ರೂ.ಗಳನ್ನು ಪಡೆಯುತ್ತಾರೆ. ಅವರಿಗೆ ಹೆಚ್ಚುವರಿ ಸೌಲಭ್ಯಗಳು ಸಹ ಉತ್ತಮವಾಗಿವೆ.

  • ಆಸ್ಟ್ರೇಲಿಯಾ: ಸಂಸದರ ವೇತನ ವಾರ್ಷಿಕವಾಗಿ ಸುಮಾರು 1.3 ಕೋಟಿ ರೂ. ಅವರಿಗೆ ಪ್ರಯಾಣ ಮತ್ತು ಕಚೇರಿ ವೆಚ್ಚಗಳಿಗೆ ಭತ್ಯೆ ಸಿಗುತ್ತದೆ.

  • ಕೆನಡಾ: ಕೆನಡಾದ ಸಂಸದರು ವಾರ್ಷಿಕವಾಗಿ ಸುಮಾರು 1.2 ಕೋಟಿ ರೂ.ಗಳನ್ನು ಪಡೆಯುತ್ತಾರೆ. ಅವರ ಸೌಲಭ್ಯಗಳು ಭಾರತಕ್ಕಿಂತ ಉತ್ತಮವಾಗಿವೆ.

  • ಜರ್ಮನಿ: ಜರ್ಮನ್ ಸಂಸದರ ವೇತನ ವಾರ್ಷಿಕವಾಗಿ ಸುಮಾರು 1.1 ಕೋಟಿ ರೂ. ಅವರು ಕಚೇರಿ ಮತ್ತು ಸಿಬ್ಬಂದಿಯನ್ನು ನಿರ್ವಹಿಸಲು ಬಜೆಟ್ ಪಡೆಯುತ್ತಾರೆ.

  • ಫ್ರಾನ್ಸ್: ಫ್ರೆಂಚ್ ಸಂಸದರು ವಾರ್ಷಿಕವಾಗಿ ಸುಮಾರು 70 ಲಕ್ಷ ರೂ.ಗಳನ್ನು ಪಡೆಯುತ್ತಾರೆ. ಅವರ ಸೌಲಭ್ಯಗಳೂ ಚೆನ್ನಾಗಿವೆ.

  • ಇಟಲಿ: ಇಲ್ಲಿ ಸಂಸದರ ವೇತನ ವಾರ್ಷಿಕವಾಗಿ ಸುಮಾರು 1 ಕೋಟಿ ರೂಪಾಯಿ ನೀಡಲಾಗುತ್ತದೆ.

  • ದಕ್ಷಿಣ ಕೊರಿಯಾ: ಕೊರಿಯಾದ ಸಂಸದರು ವಾರ್ಷಿಕವಾಗಿ ಸುಮಾರು 90 ಲಕ್ಷ ರೂ.ಗಳನ್ನು ಪಡೆಯುತ್ತಾರೆ.

  • ಸಿಂಗಾಪುರ: ಸಿಂಗಾಪುರ ಸಂಸದರು ಅತಿ ಹೆಚ್ಚು ಸಂಬಳ ಪಡೆಯುತ್ತಿದ್ದು, ಅದು ವಾರ್ಷಿಕವಾಗಿ 5 ಕೋಟಿ ರೂ.ಗಳಿಗಿಂತ ಹೆಚ್ಚು.


ಭಾರತ ಎಷ್ಟನೇ ಸ್ಥಾನದಲ್ಲಿದೆ?

ಈ ದೇಶಗಳಿಗೆ ಹೋಲಿಸಿದರೆ, ಭಾರತೀಯ ಸಂಸದರ ಸಂಬಳ ತುಂಬಾ ಕಡಿಮೆ. ನಾವು ಕೇವಲ ಸಂಬಳವನ್ನು ನೋಡಿದರೆ, ಭಾರತದ ತಿಂಗಳಿಗೆ 1.24 ಲಕ್ಷ ರೂ. (ವಾರ್ಷಿಕ 14.88 ಲಕ್ಷ ರೂ.) ಈ ಉನ್ನತ ದೇಶಗಳಿಗಿಂತ ಬಹಳ ಹಿಂದಿದೆ. ಆದರೆ ಭಾರತದ ಸ್ಥಿತಿಗತಿಗೆ ಗಮನಿಸಿದರೆ ಈ ವೇತನ ಕಡಿಮೆಯೇನಲ್ಲ. ಇದರ ಜೊತೆಗೆ ಉಚಿತ ವಸತಿ, ಪ್ರಯಾಣ ಮತ್ತು ಇತರ ಭತ್ಯೆಗಳನ್ನು ಸೇರಿಸಿದರೆ, ಈ ಮೊತ್ತವು ವರ್ಷಕ್ಕೆ 40 ಲಕ್ಷ ರೂ.ಗಳಿಗೆ ಹೆಚ್ಚಾಗುತ್ತದೆ. ಆದರೂ, ಇದು ಅಮೆರಿಕ, ಜಪಾನ್ ಅಥವಾ ಸಿಂಗಾಪುರದಂತಹ ದೇಶಗಳಿಗಿಂತ ಕಡಿಮೆಯಾಗಿದೆ.

ಭಾರತದ ಸಂಸದರಿಗೆ ವಿಠ್ಠಲಭಾಯಿ ಪಟೇಲ್ (ವಿಪಿ) ನಿವಾಸದ ಹಾಸ್ಟೆಲ್‌ನಿಂದ ಹಿಡಿದು ಮಧ್ಯ ದೆಹಲಿಯಲ್ಲಿರುವ ಎರಡು ಮಲಗುವ ಕೋಣೆಗಳ ಫ್ಲಾಟ್‌ಗಳು ಮತ್ತು ಬಂಗಲೆಗಳವರೆಗೆ ವಸತಿ ಸೌಲಭ್ಯವಿದೆ. ಅವರಿಗೆ ವಿದ್ಯುತ್, ನೀರು, ದೂರವಾಣಿ ಮತ್ತು ಇಂಟರ್ನೆಟ್ ಶುಲ್ಕಗಳಿಗೂ ಹಣ ನೀಡಲಾಗುತ್ತದೆ.

Tax Saving: 1 ವರ್ಷಕ್ಕೆ ಸೇವಿಂಗ್ಸ್ ಅಕೌಂಟ್​ನಲ್ಲಿ ಎಷ್ಟು ಹಣ ಕೂಡಿಡಬಹುದು? ಇಷ್ಟಿದ್ರೆ ತೆರಿಗೆಯವರು ನಿಮ್ಮ ಸುದ್ದಿಗೆ ಬರಲ್ಲ

ಆದರೆ ನೀವು ಯಾವಾಗಲಾದರೂ ಯೋಚಿಸಿದ್ದೀರಾ? ತೆರಿಗೆ ವಿನಾಯಿತಿ ಪಡೆಯಲು ಒಂದು ವಿತ್ತೀಯ ವರ್ಷದಲ್ಲಿ ಎಷ್ಟು ಹಣವನ್ನು ನಿಮ್ಮ ಉಳಿತಾಯ ಖಾತೆಗೆ ಠೇವಣಿ ಮಾಡಬಹುದು ಮತ್ತು ಹಿಂಪಡೆಯಬಹುದು ಎಂಬುದರ ಬಗ್ಗೆ ಇಲ್ಲಿ ತಿಳಿಯೋಣ.

ಭಾರತ ಸರ್ಕಾರ ಕಪ್ಪುಹಣವನ್ನು ನಿಯಂತ್ರಿಸಲು ಮತ್ತು ತೆರಿಗೆ ಪಾವತಿ ವ್ಯಾಪ್ತಿಯನ್ನು ಹೆಚ್ಚಿಸಲು ಕೆಲವು ನಿಯಮಗಳನ್ನು ಜಾರಿಗೆ ತಂದಿದೆ.

ಈ ನಿಯಮಗಳ ಪ್ರಕಾರ, ₹10 ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ನಗದು ಠೇವಣಿಗಳು ಅಥವಾ ಹಿಂಪಡೆಯುವಿಕೆಗಳು (SFT) ಅಡಿಯಲ್ಲಿ ಬ್ಯಾಂಕುಗಳಿಂದ ತೆರಿಗೆ ಇಲಾಖೆಗೆ ವರದಿ ಆಗುತ್ತದೆ.



ಇದರಲ್ಲಿ ಅರ್ಥವಾಗುವ ಅಂಶವೆಂದರೆ, ನೀವು ನಿಮ್ಮ ಉಳಿತಾಯ ಖಾತೆಗೆ ಒಂದು ವಿತ್ತೀಯ ವರ್ಷದಲ್ಲಿ ₹10 ಲಕ್ಷಕ್ಕಿಂತ ಹೆಚ್ಚು ಹಣ ಠೇವಣಿ ಮಾಡಿದರೆ ಅಥವಾ ಹಿಂಪಡೆದಿದ್ದರೆ, ಬ್ಯಾಂಕ್ ಅದನ್ನು ಸರ್ಕಾರಕ್ಕೆ ವರದಿ ಮಾಡುತ್ತದೆ.

ಕೆಳಗಿನ ಪ್ರಮುಖ ನಿಯಮಗಳನ್ನು ಗಮನದಲ್ಲಿರಿಸಿ:

1. ಉಳಿತಾಯ ಖಾತೆ (Savings Account)

ನಿಮ್ಮ ಉಳಿತಾಯ ಖಾತೆಗೆ ₹10 ಲಕ್ಷ ಅಥವಾ ಹೆಚ್ಚು ನಗದು ಠೇವಣಿ ಮಾಡಿದರೆ ಅಥವಾ ಹಿಂಪಡೆದಿದ್ದರೆ, ಅದನ್ನು ಬ್ಯಾಂಕ್ ತೆರಿಗೆ ಇಲಾಖೆಗೆ ವರದಿ ಮಾಡುವುದು ಕಡ್ಡಾಯ.

2. ಚಾಲ್ತಿ ಖಾತೆ (Current Account)

ಚಾಲ್ತಿ ಖಾತೆಯ ಸಂದರ್ಭದಲ್ಲಿ, ₹50 ಲಕ್ಷ ಅಥವಾ ಹೆಚ್ಚು ಠೇವಣಿ ಮಾಡಿದರೆ ಅಥವಾ ಹಿಂಪಡೆದಿದ್ದರೆ, ಅದನ್ನು ತೆರಿಗೆ ಅಧಿಕಾರಿಗಳಿಗೆ ವರದಿ ಮಾಡಲಾಗುತ್ತದೆ.

3. ಕ್ರೆಡಿಟ್ ಕಾರ್ಡ್ ವ್ಯವಹಾರಗಳು

₹1 ಲಕ್ಷ ಅಥವಾ ಹೆಚ್ಚು ನಗದು ಪಾವತಿ ಮಾಡಿದರೆ, ಅಥವಾ
₹10 ಲಕ್ಷ ಅಥವಾ ಹೆಚ್ಚು ಬೇರೆ ಯಾವುದೇ ವಿಧದ ಪಾವತಿ ಮಾಡಿದರೆ, ಬ್ಯಾಂಕ್ ಅದನ್ನು ಸರ್ಕಾರಕ್ಕೆ ವರದಿ ಮಾಡುತ್ತದೆ.



4. ಹೂಡಿಕೆ

₹10 ಲಕ್ಷ ಅಥವಾ ಹೆಚ್ಚು ಬಾಂಡ್ ಅಥವಾ ಷೇರುಗಳನ್ನು ಖರೀದಿಸಿದರೆ, ಕಂಪನಿಯು ಅದನ್ನು ತೆರಿಗೆ ಇಲಾಖೆಗೆ ವರದಿ ಮಾಡಬೇಕು.
₹10 ಲಕ್ಷ ಅಥವಾ ಹೆಚ್ಚು ಮ್ಯೂಚುವಲ್ ಫಂಡ್ ಹೂಡಿಕೆ ಮಾಡಿದರೆ, ಇದೂ ತೆರಿಗೆ ಇಲಾಖೆ ಗಮನಕ್ಕೆ ಬರುತ್ತದೆ.

5. ವಿದೇಶಿ ವಿನಿಮಯ

₹10 ಲಕ್ಷ ಅಥವಾ ಹೆಚ್ಚು ವಿದೇಶಿ ಕರೆನ್ಸಿ ಖರೀದಿಸಿದರೆ ಅಥವಾ ಮಾರಿದರೆ, ಅದು ತೆರಿಗೆ ಇಲಾಖೆಗೆ ವರದಿ ಆಗುತ್ತದೆ.



6. ಆಸ್ತಿ ಖರೀದಿ

₹30 ಲಕ್ಷ ಅಥವಾ ಹೆಚ್ಚು ಮೌಲ್ಯದ ಆಸ್ತಿಯನ್ನು (ಮನೆ, ಭೂಮಿ) ಖರೀದಿಸಿದರೆ ಅಥವಾ ಮಾರಿದರೆ, ಅದು ತೆರಿಗೆ ಅಧಿಕಾರಿಗಳಿಗೆ ವರದಿ ಮಾಡಲಾಗುತ್ತದೆ.

ಈ ನಿಯಮಗಳನ್ನು ಪಾಲಿಸದೆ ಇದ್ದರೆ ಏನಾಗಬಹುದು?

ನಿಮ್ಮ ಖಾತೆಗಳಲ್ಲಿ ಮಿತಿ ಮೀರಿದ ಹಣ ಠೇವಣಿ ಅಥವಾ ಹಿಂಪಡೆಯುವ ಸಂದರ್ಭಗಳು ಇದ್ದರೆ, ಆದಾಯದ ಮೂಲದ ಬಗ್ಗೆ ತೆರಿಗೆ ಇಲಾಖೆ ತನಿಖೆ ನಡೆಸಬಹುದು.



ನೀವು ಸುಪ್ರೀಂಕೋರ್ಟ್ ಅಥವಾ ತೆರಿಗೆ ಇಲಾಖೆಯಿಂದ ನೋಟಿಸ್ ಪಡೆಯಬಹುದು ಮತ್ತು ಹಣಕಾಸಿನ ಲೆಕ್ಕ ತೋರಿಸಲು ನಿಮಗೆ ಹೇಳಬಹುದು. ತೆರಿಗೆ ತಪ್ಪಿಸುವುದು ಅಥವಾ ಕಪ್ಪುಹಣ ಬಳಸುವುದು ಎಂಬ ಆರೋಪ ಎದುರಿಸಬೇಕಾಗಬಹುದು.

ಇದಕ್ಕೆ ನಾವು ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು?

ನಗದು ಠೇವಣಿಗಳನ್ನು ಮಿತಿಯಲ್ಲಿ ಇರಿಸಿ ಮತ್ತು ಬಹು ದೊಡ್ಡ ಮೊತ್ತಗಳನ್ನು ಬ್ಯಾಂಕಿಂಗ್ ಚಾನಲ್ ಮೂಲಕ ಪಾವತಿ ಮಾಡಿ.
ನಿಮ್ಮ ಆದಾಯವನ್ನು ಸರಿಯಾಗಿ ಘೋಷಿಸಿ ಮತ್ತು ಎಲ್ಲ ವರ್ಗಾವಣೆಗಳಿಗೆ ಸೂಕ್ತ ದಾಖಲೆಗಳನ್ನು ಇರಿಸಿ.



ಸಾಲ, ಉಡುಗೊರೆ ಅಥವಾ ಇತರ ಅನಿಯಮಿತ ಹಣ ವರ್ಗಾವಣೆಗಳನ್ನು ಕಡಿಮೆ ಮಾಡಿ, ಏಕೆಂದರೆ ಇವು ತೆರಿಗೆ ಇಲಾಖೆಯ ಶಂಕೆಗೆ ಕಾರಣವಾಗಬಹುದು.
ನಿಯಮಿತ ಆದಾಯ ಹೊಂದಿರುವವರು ತಮ್ಮ ಆದಾಯವನ್ನು ಸರಿಯಾಗಿ ಘೋಷಿಸಿ ಹಾಗೂ ಅಗತ್ಯವಿದ್ದರೆ ತೆರಿಗೆ ಸಲಹೆಗಾರರ ಸಲಹೆ ಪಡೆಯಬೇಕು.

ನೀವು ಎಚ್ಚರಿಕೆಯಿಂದ ಹಣ ವ್ಯವಹಾರಗಳನ್ನು ನಿರ್ವಹಿಸಿದರೆ, ತೆರಿಗೆ ಇಲಾಖೆಯಿಂದ ಯಾವುದೇ ತೊಂದರೆಗೊಳಗಾಗುವುದಿಲ್ಲ.

ರಾಜ್ಯ ಸರ್ಕಾರಿ ನೌಕರ'ರಿಗೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾದ ಸರ್ಕಾರ

ಈ ಸಂಬಂಧ ರಾಜ್ಯ ಸರ್ಕಾರದಿಂದ ಸಭಾ ಸೂಚನಾ ಪತ್ರವನ್ನು ಹೊರಡಿಸಲಾಗಿದ್ದು, ರಾಜ್ಯ ಸಚಿವ ಸಂಪುಟದ ತೀರ್ಮಾನಿಸಿದಂತೆ ಅಧಿಕಾರಿ, ನೌಕರರು ಮತ್ತು ಅವಲಂಬಿತ ಕುಟುಂಬದ ಸದಸ್ಯರ ಹ...