ಹೈದರಾಬಾದ್ ಕರ್ನಾಟಕ ಪ್ರದೇಶ

ಹೈದರಾಬಾದ್ ಕರ್ನಾಟಕ ಪ್ರದೇಶ
Hyderabad Karnataka

ಭಾನುವಾರ, ಸೆಪ್ಟೆಂಬರ್ 1, 2024

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ

ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.

ಹಾಲಿ ಜಮೀನುಗಳು ಕೃಷಿ ಚಟುವಟಿಕೆಯಲ್ಲಿರಬೇಕು.

ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು.

ಫಲಾನುಭವಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.

ವಯಸ್ಸು 18 ರಿಂದ 60 ವರ್ಷದೊಳಗಿರಬೇಕು.

ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98 ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1.20 ಲಕ್ಷಗಳು ಒಳಗಿರಬೇಕು.

ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 02 ಎಕರೆ ಜಮೀನು ಹೊಂದಿರಬೇಕು.

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ 4 ಲಕ್ಷ ಸಬ್ಸಿಡಿಯನ್ನು ನೀಡುವ ಮೂಲಕ ರಾಜ್ಯದ ರೈತರಿಗೆ ಬೋರ್ವೆಲ್ ಕೊರಸಿಕೊಳ್ಳುವ ಅವಕಾಶವನ್ನು ನೀಡಿದೆ.

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.

ಆಧಾರ್ ಕಾರ್ಡ್

ಬ್ಯಾಂಕ್ ಪಾಸ್ ಬುಕ್

ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಸ್ವಂತ ಜಮೀನಿನ ಪಹಣಿ

ಅರ್ಜಿದಾರರ ಭಾವಚಿತ್ರ

ಬಿಪಿಎಲ್ ರೇಷನ್ ಕಾರ್ಡ್

ಮೊಬೈಲ್ ಸಂಖ್ಯೆ

ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಯನ್ನು ಸೆ.15 ರೊಳಗಾಗಿ ಸಲ್ಲಿಸಬಹುದು.

ಕಾಮೆಂಟ್‌ಗಳಿಲ್ಲ:

Pension Scheme: 210 ರೂ. ಹೂಡಿಕೆ ಮಾಡಿ ತಿಂಗಳಿಗೆ 5000 ಪಡೆಯಿರಿ! 8 ಕೋಟಿ ಜನರು ನೋಂದಾಯಿಸಿಕೊಂಡಿರುವ ಬೆಸ್ಟ್‌ ಯೋಜನೆ

ಇನ್ನು ಈ ಅಟಲ್‌ ಪಿಂಚಣಿ ಯೋಜನೆಯನ್ನು (Atal Pension Yojana) ಭಾರತೀಯ ಪಿಂಚಣಿ ನಿಧಿಗಳ ನಿಯಂತ್ರಣ ಪ್ರಾಧಿಕಾರವು (PFRDA) ನಿಯಂತ್ರಿಸುತ್ತದೆ. ನಿವೃತ್ತಿ ಸಮಯದಲ್ಲಿ ಉ...